ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಣಮನಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ರೈತ ಕೆಂಚಪ್ಪ ಬಸವಣ್ಣೆಪ್ಪ ಕಾವಳದ (31) ಎಂಬುವರು ಮೃತಪಟ್ಟಿದ್ದಾರೆ. ಅವರಿಗೆ ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ಜಮೀನಿನಲ್ಲಿ ನೀರು ಹಾಯಿಸುವಾಗ ಸಿಡಿಲು ಬಡಿದಿದೆ.ಪ್ರಕೃತಿ ವಿಕೋಪ ಪರಿಹಾರದಡಿ ಕೆಂಚಪ್ಪ ಅವರ ಕುಟುಂಬಕ್ಕೆ ಪರಿಹಾರ ಒದಗಿಸಲಾಗುವುದು ಎಂದು ತಹಶೀಲ್ದಾರ್ ಎಚ್.ಎನ್. ಶಿರಹಟ್ಟಿ ತಿಳಿಸಿದ್ದಾರೆ.