<p><strong>ಬೆಳಗಾವಿ</strong>: ‘ಗದಗಿನ ಶಿವಾನಂದ ಮಠದ ಸದಾಶಿವಾನಂದ ಸ್ವಾಮೀಜಿ ಸಂಪಾದಕತ್ವದಲ್ಲಿ ಹೊರತಂದ ‘ವಚನ ದರ್ಶನ’ ಪುಸ್ತಕದಲ್ಲಿ ಬಸವಣ್ಣನವರ ವ್ಯಕ್ತಿತ್ವ ತಿರುಚಲಾಗಿದೆ. ರಾಜ್ಯ ಸರ್ಕಾರ ಈ ಪುಸ್ತಕವನ್ನು ಮುಟ್ಟುಗೋಲು ಹಾಕಬೇಕು’ ಎಂದು ರಾಮದುರ್ಗ ತಾಲ್ಲೂಕಿನ ನಾಗನೂರಿನ ಗುರುಬಸವ ಮಠದ ಕಾರ್ಯದರ್ಶಿ ಡಿ.ಬಿ.ನಿವೇದಿತಾ ಒತ್ತಾಯಿಸಿದರು.</p>.<p>‘ಬ್ರಾಹ್ಮಣರಾಗಿದ್ದ ಬಸವಣ್ಣ ವೈದಿಕ ಧರ್ಮ ಒಪ್ಪಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಶ್ರಮಿಸಿದ್ದರು ಎಂಬ ಅರ್ಥದಲ್ಲಿ ಈ ಪುಸ್ತಕದಲ್ಲಿ ಬಿಂಬಿಸಲಾಗಿದೆ. ಇದು ಶುದ್ಧ ಸುಳ್ಳು. ಅವರು ಎಂದಿಗೂ ಹಿಂದೂ ಧರ್ಮ ಮತ್ತು ಬ್ರಾಹ್ಮಣತ್ವ ಒಪ್ಪಲೇ ಇಲ್ಲ. ತಾನು ಬ್ರಾಹ್ಮಣ ಎಂದೂ ಹೇಳಿಕೊಂಡಿಲ್ಲ. ಆದರೆ, ಈ ಪುಸ್ತಕದ ಮೂಲಕ ಲಿಂಗಾಯತರ ದಿಕ್ಕು ತಪ್ಪಿಸುವ ಕೆಲಸ ನಡೆದಿದೆ. ಸಮಾಜದ ಸ್ವಾಸ್ಥ್ಯ ಕೆಡಿಸಲು ಯತ್ನಿಸುವವರ ವಿರುದ್ಧ ಕ್ರಮವಾಗಬೇಕು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಕಂದಾಚಾರ, ಲಿಂಗ ಅಸಮಾನತೆ ವಿರುದ್ಧ ಸಿಡಿದೆದ್ದು, ವೈದಿಕ ಧರ್ಮದಿಂದ ಹೊರಬಂದವರು ಬಸವಣ್ಣ. ವೈದಿಕತೆ ವಿರುದ್ಧ ಹುಟ್ಟಿಕೊಂಡಿರುವುದೇ ಲಿಂಗಾಯತ ಧರ್ಮ. ಬಸವಣ್ಣನವರ ವ್ಯಕ್ತಿತ್ವ ಹೇಗಿತ್ತು ಎಂಬುದನ್ನು ಅವರ ವಚನಗಳೇ ಹೇಳುತ್ತವೆ. ಎಲ್ಲ ಶರಣರು ತಮ್ಮ ವಚನಗಳಲ್ಲಿ ವೈದಿಕತೆಯನ್ನು ಬಲವಾಗಿ ವಿರೋಧಿಸಿದ್ದಾರೆ. ಆದರೆ, ಕೆಲವರು ಈ ಪುಸ್ತಕದ ಮೂಲಕ ಲಿಂಗಾಯತವನ್ನು ಹಿಂದೂ ಧರ್ಮದ ಭಾಗ ಮಾಡಲು ಹೊರಟಿದ್ದಾರೆ’ ಎಂದರು.</p>.<p>‘ಲಿಂಗಾಯತ ಎಂಬುದು ವೈಚಾರಿಕತೆ ಹೊಂದಿರುವ ಧರ್ಮ. ಇದರಿಂದ ತಮ್ಮ ಅಸ್ತಿತ್ವ ಉಳಿಯದು ಎನ್ನುವ ಕಾರಣಕ್ಕೆ, ಕೆಲವರು ಈ ಪುಸ್ತಕ ಪ್ರಕಟಿಸಿದ್ದಾರೆ. ಆದರೆ, ಬಸವಣ್ಣನವರ ಬಗ್ಗೆ ಸಮಾಜಕ್ಕೆ ತಪ್ಪು ಸಂದೇಶ ಹೋಗಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಗದಗಿನ ಶಿವಾನಂದ ಮಠದ ಸದಾಶಿವಾನಂದ ಸ್ವಾಮೀಜಿ ಸಂಪಾದಕತ್ವದಲ್ಲಿ ಹೊರತಂದ ‘ವಚನ ದರ್ಶನ’ ಪುಸ್ತಕದಲ್ಲಿ ಬಸವಣ್ಣನವರ ವ್ಯಕ್ತಿತ್ವ ತಿರುಚಲಾಗಿದೆ. ರಾಜ್ಯ ಸರ್ಕಾರ ಈ ಪುಸ್ತಕವನ್ನು ಮುಟ್ಟುಗೋಲು ಹಾಕಬೇಕು’ ಎಂದು ರಾಮದುರ್ಗ ತಾಲ್ಲೂಕಿನ ನಾಗನೂರಿನ ಗುರುಬಸವ ಮಠದ ಕಾರ್ಯದರ್ಶಿ ಡಿ.ಬಿ.ನಿವೇದಿತಾ ಒತ್ತಾಯಿಸಿದರು.</p>.<p>‘ಬ್ರಾಹ್ಮಣರಾಗಿದ್ದ ಬಸವಣ್ಣ ವೈದಿಕ ಧರ್ಮ ಒಪ್ಪಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಶ್ರಮಿಸಿದ್ದರು ಎಂಬ ಅರ್ಥದಲ್ಲಿ ಈ ಪುಸ್ತಕದಲ್ಲಿ ಬಿಂಬಿಸಲಾಗಿದೆ. ಇದು ಶುದ್ಧ ಸುಳ್ಳು. ಅವರು ಎಂದಿಗೂ ಹಿಂದೂ ಧರ್ಮ ಮತ್ತು ಬ್ರಾಹ್ಮಣತ್ವ ಒಪ್ಪಲೇ ಇಲ್ಲ. ತಾನು ಬ್ರಾಹ್ಮಣ ಎಂದೂ ಹೇಳಿಕೊಂಡಿಲ್ಲ. ಆದರೆ, ಈ ಪುಸ್ತಕದ ಮೂಲಕ ಲಿಂಗಾಯತರ ದಿಕ್ಕು ತಪ್ಪಿಸುವ ಕೆಲಸ ನಡೆದಿದೆ. ಸಮಾಜದ ಸ್ವಾಸ್ಥ್ಯ ಕೆಡಿಸಲು ಯತ್ನಿಸುವವರ ವಿರುದ್ಧ ಕ್ರಮವಾಗಬೇಕು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಕಂದಾಚಾರ, ಲಿಂಗ ಅಸಮಾನತೆ ವಿರುದ್ಧ ಸಿಡಿದೆದ್ದು, ವೈದಿಕ ಧರ್ಮದಿಂದ ಹೊರಬಂದವರು ಬಸವಣ್ಣ. ವೈದಿಕತೆ ವಿರುದ್ಧ ಹುಟ್ಟಿಕೊಂಡಿರುವುದೇ ಲಿಂಗಾಯತ ಧರ್ಮ. ಬಸವಣ್ಣನವರ ವ್ಯಕ್ತಿತ್ವ ಹೇಗಿತ್ತು ಎಂಬುದನ್ನು ಅವರ ವಚನಗಳೇ ಹೇಳುತ್ತವೆ. ಎಲ್ಲ ಶರಣರು ತಮ್ಮ ವಚನಗಳಲ್ಲಿ ವೈದಿಕತೆಯನ್ನು ಬಲವಾಗಿ ವಿರೋಧಿಸಿದ್ದಾರೆ. ಆದರೆ, ಕೆಲವರು ಈ ಪುಸ್ತಕದ ಮೂಲಕ ಲಿಂಗಾಯತವನ್ನು ಹಿಂದೂ ಧರ್ಮದ ಭಾಗ ಮಾಡಲು ಹೊರಟಿದ್ದಾರೆ’ ಎಂದರು.</p>.<p>‘ಲಿಂಗಾಯತ ಎಂಬುದು ವೈಚಾರಿಕತೆ ಹೊಂದಿರುವ ಧರ್ಮ. ಇದರಿಂದ ತಮ್ಮ ಅಸ್ತಿತ್ವ ಉಳಿಯದು ಎನ್ನುವ ಕಾರಣಕ್ಕೆ, ಕೆಲವರು ಈ ಪುಸ್ತಕ ಪ್ರಕಟಿಸಿದ್ದಾರೆ. ಆದರೆ, ಬಸವಣ್ಣನವರ ಬಗ್ಗೆ ಸಮಾಜಕ್ಕೆ ತಪ್ಪು ಸಂದೇಶ ಹೋಗಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>