<p><strong>ರಾಮದುರ್ಗ</strong>: ‘ಜಾತಿ ಗಣತಿ ಸಮಯದಲ್ಲಿ ಏನು ಬರೆಯಿಸಬೇಕು ಎನ್ನುವ ಗೊಂದಲದಲ್ಲಿರುವ ಲಿಂಗಾಯತ ಸಮಾಜಕ್ಕೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪಂಚಾಚಾರ್ಯರು, ಶಿವಾಚಾರ್ಯರು ಮತ್ತು ಗುರುವಿರಕ್ತರು ಒಂದಾಗಿ ಒಂದೇ ವೇದಿಕೆಯಲ್ಲಿ ನಿರ್ಧಾರ ತೆಗೆದುಕೊಂಡು ಸಂದೇಶ ನೀಡಬೇಕು‘ ಎಂದು ನರಗುಂದದ ಶಾಸಕ ಸಿ.ಸಿ. ಪಾಟೀಲ ಹೇಳಿದರು.</p><p>ತಾಲ್ಲೂಕಿನ ಸುಕ್ಷೇತ್ರ ಕಲ್ಲೂರು ಸಿದ್ಧೇಶ್ವರ ದೇವಸ್ಥಾನದಲ್ಲಿ ನಡೆದ ತೊಂಟದಾರ್ಯಮಠ ಶಿರೋಳದ ಶಾಂತಲಿಂಗ ಸ್ವಾಮೀಜಿಯ 16ನೇ ವರ್ಷದ ಮೌನಾನುಷ್ಠಾನ ಮಂಗಲೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p><p>‘ಈ ವಿಷಯವನ್ನು ದಾವಣಗೇರಿಯಲ್ಲಿ ನಡೆದ ಶಿವಾಚಾರ್ಯರ ಸಭೆಯಲ್ಲಿ ಕೂಡಾ ಪ್ರಸ್ತಾಪಿಸಿದ್ದೇನೆ. ಸಮಾಜದ ಮುಖಂಡರಾದ ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಎಲ್ಲ ನಾಯಕರು ಕೂಡಾ ಈ ಕುರಿತು ಚಿಂತನೆ ನಡೆಸಿ ಸರ್ಕಾರದ ಸೌಲಭ್ಯವನ್ನು ಮಕ್ಕಳಿಗೆ ಕೊಡಿಸಲು ಮುಂದಾಗಬೇಕು‘ ಎಂದು ಹೇಳಿದರು.</p>.<p>ಶಾಂತಲಿಂಗ ಸ್ವಾಮೀಜಿ ಒಂದು ತಿಂಗಳು ಕೈಗೊಂಡ ಮೌನಾನುಷ್ಠಾನದ ಫಲ ನಾಡಿನ ಜನರಿಗೆ ಲಭಿಸಲಿ, ಮಳೆ ಬೆಳೆ ಚನ್ನಾಗಿ ಆಗಲಿ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಗದಗದ ತೋಂಟದಾರ್ಯ ಸಂಸ್ಥಾನಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, 12ನೇ ಶತಮಾನದ ಬಸವಾದಿ ಶರಣರ ವಚನಗಳನ್ನು ದೇಶದ ಮಕ್ಕಳಿಗೆ ವಚನಗಳ ಅಧ್ಯಯನದ ಮಹತ್ವ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.</p>.<p>ಬಸವಾದಿ ಶರಣರು ವಚನಗಳನ್ನು ರಚಿಸಿದ್ದಲ್ಲದೆ ಅವುಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ನುಡಿದಂತೆ ನಡೆದಿದ್ದಾರೆ ಅಂತಹ ವಚನಗಳು ನಮಗೆಲ್ಲ ಮಾದರಿಯಾಗಿವೆ ಎಂದರು.</p>.<p>ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ. ಶಶಿಕಾಂತ ಪಟ್ಟಣ ಮಾತನಾಡಿ, ವಿಶ್ವಗುರು ಬಸವಣ್ಣನವರು ಮತ್ತು ಸಮಕಾಲೀನ ಶರಣರು ಜನಸಾಮಾನ್ಯರ ಭಾಷೆಯಲ್ಲಿ ವಚನಗಳನ್ನು ನೀಡಿದ್ದಾರೆ. ಅವುಗಳನ್ನು ಆಚರಣೆ ಮಾಡಿದರೆ ಮನುಷ್ಯ ಸುಸಂಸ್ಕೃತ ಜೀವನ ನಡೆಸಲು ಸಾಧ್ಯವಿದೆ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಕಾರ್ಗಿಲ್ ವಿಜಯೋತ್ಸವ 25ನೇ ವರ್ಷದ ಅಂಗವಾಗಿ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು.</p>.<p>ಮುಳ್ಳೂರಿನ ಚಂದ್ರಶೇಖರ ಶಿವಾಚಾರ್ಯರು, ಕಟಕೋಳದ ಸಚ್ಚಿದಾನಂದ ಸ್ವಾಮೀಜಿ, ರಾಮದುರ್ಗದ ಶಾಂತವೀರಸ್ವಾಮೀಜಿ, ಮೊರಬದ ಶಾಂತವೀರ ಶಿವಾಚಾರ್ಯರು, ನರಗುಂದದ ಸಿದ್ಧಲಿಂಗ ಶಿವಾಚಾರ್ಯರು, ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯರು, ಶಿವಕುಮಾರ ಸ್ವಾಮೀಜಿ, ಮೊರಬದ ಆನಂದ ಸ್ವಾಮೀಜಿ, ವಿಜಯಪುರದ ಅಣ್ಣಾರಾಯ ಬಿರಾದರ, ಬಸವರಾಜ ಚಿಕ್ಕಮಠ, ಸುರೇಶ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ</strong>: ‘ಜಾತಿ ಗಣತಿ ಸಮಯದಲ್ಲಿ ಏನು ಬರೆಯಿಸಬೇಕು ಎನ್ನುವ ಗೊಂದಲದಲ್ಲಿರುವ ಲಿಂಗಾಯತ ಸಮಾಜಕ್ಕೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪಂಚಾಚಾರ್ಯರು, ಶಿವಾಚಾರ್ಯರು ಮತ್ತು ಗುರುವಿರಕ್ತರು ಒಂದಾಗಿ ಒಂದೇ ವೇದಿಕೆಯಲ್ಲಿ ನಿರ್ಧಾರ ತೆಗೆದುಕೊಂಡು ಸಂದೇಶ ನೀಡಬೇಕು‘ ಎಂದು ನರಗುಂದದ ಶಾಸಕ ಸಿ.ಸಿ. ಪಾಟೀಲ ಹೇಳಿದರು.</p><p>ತಾಲ್ಲೂಕಿನ ಸುಕ್ಷೇತ್ರ ಕಲ್ಲೂರು ಸಿದ್ಧೇಶ್ವರ ದೇವಸ್ಥಾನದಲ್ಲಿ ನಡೆದ ತೊಂಟದಾರ್ಯಮಠ ಶಿರೋಳದ ಶಾಂತಲಿಂಗ ಸ್ವಾಮೀಜಿಯ 16ನೇ ವರ್ಷದ ಮೌನಾನುಷ್ಠಾನ ಮಂಗಲೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p><p>‘ಈ ವಿಷಯವನ್ನು ದಾವಣಗೇರಿಯಲ್ಲಿ ನಡೆದ ಶಿವಾಚಾರ್ಯರ ಸಭೆಯಲ್ಲಿ ಕೂಡಾ ಪ್ರಸ್ತಾಪಿಸಿದ್ದೇನೆ. ಸಮಾಜದ ಮುಖಂಡರಾದ ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಎಲ್ಲ ನಾಯಕರು ಕೂಡಾ ಈ ಕುರಿತು ಚಿಂತನೆ ನಡೆಸಿ ಸರ್ಕಾರದ ಸೌಲಭ್ಯವನ್ನು ಮಕ್ಕಳಿಗೆ ಕೊಡಿಸಲು ಮುಂದಾಗಬೇಕು‘ ಎಂದು ಹೇಳಿದರು.</p>.<p>ಶಾಂತಲಿಂಗ ಸ್ವಾಮೀಜಿ ಒಂದು ತಿಂಗಳು ಕೈಗೊಂಡ ಮೌನಾನುಷ್ಠಾನದ ಫಲ ನಾಡಿನ ಜನರಿಗೆ ಲಭಿಸಲಿ, ಮಳೆ ಬೆಳೆ ಚನ್ನಾಗಿ ಆಗಲಿ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಗದಗದ ತೋಂಟದಾರ್ಯ ಸಂಸ್ಥಾನಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, 12ನೇ ಶತಮಾನದ ಬಸವಾದಿ ಶರಣರ ವಚನಗಳನ್ನು ದೇಶದ ಮಕ್ಕಳಿಗೆ ವಚನಗಳ ಅಧ್ಯಯನದ ಮಹತ್ವ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.</p>.<p>ಬಸವಾದಿ ಶರಣರು ವಚನಗಳನ್ನು ರಚಿಸಿದ್ದಲ್ಲದೆ ಅವುಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ನುಡಿದಂತೆ ನಡೆದಿದ್ದಾರೆ ಅಂತಹ ವಚನಗಳು ನಮಗೆಲ್ಲ ಮಾದರಿಯಾಗಿವೆ ಎಂದರು.</p>.<p>ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ. ಶಶಿಕಾಂತ ಪಟ್ಟಣ ಮಾತನಾಡಿ, ವಿಶ್ವಗುರು ಬಸವಣ್ಣನವರು ಮತ್ತು ಸಮಕಾಲೀನ ಶರಣರು ಜನಸಾಮಾನ್ಯರ ಭಾಷೆಯಲ್ಲಿ ವಚನಗಳನ್ನು ನೀಡಿದ್ದಾರೆ. ಅವುಗಳನ್ನು ಆಚರಣೆ ಮಾಡಿದರೆ ಮನುಷ್ಯ ಸುಸಂಸ್ಕೃತ ಜೀವನ ನಡೆಸಲು ಸಾಧ್ಯವಿದೆ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಕಾರ್ಗಿಲ್ ವಿಜಯೋತ್ಸವ 25ನೇ ವರ್ಷದ ಅಂಗವಾಗಿ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು.</p>.<p>ಮುಳ್ಳೂರಿನ ಚಂದ್ರಶೇಖರ ಶಿವಾಚಾರ್ಯರು, ಕಟಕೋಳದ ಸಚ್ಚಿದಾನಂದ ಸ್ವಾಮೀಜಿ, ರಾಮದುರ್ಗದ ಶಾಂತವೀರಸ್ವಾಮೀಜಿ, ಮೊರಬದ ಶಾಂತವೀರ ಶಿವಾಚಾರ್ಯರು, ನರಗುಂದದ ಸಿದ್ಧಲಿಂಗ ಶಿವಾಚಾರ್ಯರು, ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯರು, ಶಿವಕುಮಾರ ಸ್ವಾಮೀಜಿ, ಮೊರಬದ ಆನಂದ ಸ್ವಾಮೀಜಿ, ವಿಜಯಪುರದ ಅಣ್ಣಾರಾಯ ಬಿರಾದರ, ಬಸವರಾಜ ಚಿಕ್ಕಮಠ, ಸುರೇಶ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>