‘ವೀರಶೈವ, ಲಿಂಗಾಯತ ಎರಡೂ ಒಂದೇ ಎನ್ನುವುದನ್ನು ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದೇವೆ. ಇನ್ನು ಮುಂದೆ ಒಳಪಂಗಡಗಳ ನಡುವಿನ ಅಂತರ ಕುಗ್ಗಿಸಲು ಹೆಣ್ಣು ಕೊಡುವುದು– ತೆಗೆದುಕೊಳ್ಳುವುದನ್ನು ಮಾಡಬೇಕು. ಒಗ್ಗಟ್ಟಿನಿಂದ ಇರಬೇಕು. ಮಹಾಸಭಾ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ. ಇಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲ ಪಕ್ಷದವರೂ ಇದ್ದು, ಸಮಾಜದ ವಿಷಯದಲ್ಲಿ ಎಲ್ಲರೂ ಒಂದಾಗುತ್ತಾರೆ’ ಎಂದರು.