‘ಬನ್ನೇರಘಟ್ಟ ಜೈವಿಕ ಉದ್ಯಾನದಿಂದ ತರಲಾಗಿರುವ ‘ನಕುಲ’, ‘ಕೃಷ್ಣ’ ಹಾಗೂ ‘ನಿರುಪಮಾ’ ಹೆಸರಿನ 11 ವರ್ಷದ ಸಿಂಹಗಳಿಗೆ ದಿನಕ್ಕೆ ತಲಾ 7ರಿಂದ 9 ಕೆ.ಜಿ. ದನದ ಮಾಂಸ ಬೇಕು. ಆದರೆ, ಕಾಯ್ದೆ ಜಾರಿ ಪರಿಣಾಮ ಆ ಮಾಂಸ ಸಿಗುತ್ತಿಲ್ಲ. ಪರಿಣಾಮ ಚಿಕನ್ ಹಾಗೂ ಚಿಕನ್ ಲಿವರ್ ಕೊಡಲಾಗುತ್ತಿದೆ. ಇಲ್ಲಿಗೆ ಬಂದ ಮೊದಲೆರಡು ದಿನ ಕಡಿಮೆ ಆಹಾರ ತಿನ್ನುತ್ತಿದ್ದವು. ಕ್ರಮೇಣ ಹೆಚ್ಚಿನ ಆಹಾರ ತಿನ್ನುತ್ತಿವೆ’ ಎಂದು ಬೆಳಗಾವಿ ವೃತ್ತದ ಸಿಸಿಎಫ್ ಬಸವರಾಜ ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದರು.