<p><strong>ಬೆಳಗಾವಿ:</strong> ನಗರದ ಟಿಳಕವಾಡಿಯಲ್ಲಿರುವ ನೆಹರೂ ರಸ್ತೆಯ ಕಟ್ಟಡವೊಂದರ ಸೆಲ್ಲಾರ್ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 8 ಲಕ್ಷ ಮೌಲ್ಯದ 232.500 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಟಿಳಕವಾಡಿಯ ದ್ವಾರಕ ನಗರದ ಶಾಮ್ ರೆಡ್ಡಿ (52) ಬಂಧಿತ ಆರೋಪಿ. ಅವರನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದೆ.</p>.<p>‘ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ರಕ್ಷಣಾ ಇಲಾಖೆಯ ಕ್ಯಾಂಟೀನ್ನಿಂದ ಖರೀದಿಸಿದ ಮದ್ಯವನ್ನು ಮಾರಾಟಕ್ಕಾಗಿ ಹೊಂದಿದ್ದರು. ಸಾಗಣೆ ಮಾಡುತ್ತಿದ್ದಾಗ ದ್ವಿಚಕ್ರವಾಹನ ಸಮೇತ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಅಬಕಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮತ್ತು ಬೆಳಗಾವಿ ದಕ್ಷಿಣ ಜಿಲ್ಲೆಯ ಆಯುಕ್ತ ಜಯರಾಮೇಗೌಡ ಎಂ.ಡಿ. ಅವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಸೂಪರಿಂಟೆಂಡೆಂಟ್ ಸಿ.ಎಸ್. ಪಾಟೀಲ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮಂಜುನಾಥ ಮೆಳ್ಳಿಗೇರಿ ಹಾಗೂ ಸಿಬ್ಬಂದಿ ಆರ್.ಎಂ. ನದಾಫ, ಸಂತೋಷ ದೊಡ್ಡಮನಿ, ಆರ್. ತಿಗಡಿ, ಆನಂದ ಪಾಟೀಲ, ವಿನಾಯಕ ಬೋರಣ್ನವರ ದಾಳಿಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ನಗರದ ಟಿಳಕವಾಡಿಯಲ್ಲಿರುವ ನೆಹರೂ ರಸ್ತೆಯ ಕಟ್ಟಡವೊಂದರ ಸೆಲ್ಲಾರ್ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 8 ಲಕ್ಷ ಮೌಲ್ಯದ 232.500 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಟಿಳಕವಾಡಿಯ ದ್ವಾರಕ ನಗರದ ಶಾಮ್ ರೆಡ್ಡಿ (52) ಬಂಧಿತ ಆರೋಪಿ. ಅವರನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದೆ.</p>.<p>‘ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ರಕ್ಷಣಾ ಇಲಾಖೆಯ ಕ್ಯಾಂಟೀನ್ನಿಂದ ಖರೀದಿಸಿದ ಮದ್ಯವನ್ನು ಮಾರಾಟಕ್ಕಾಗಿ ಹೊಂದಿದ್ದರು. ಸಾಗಣೆ ಮಾಡುತ್ತಿದ್ದಾಗ ದ್ವಿಚಕ್ರವಾಹನ ಸಮೇತ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಅಬಕಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮತ್ತು ಬೆಳಗಾವಿ ದಕ್ಷಿಣ ಜಿಲ್ಲೆಯ ಆಯುಕ್ತ ಜಯರಾಮೇಗೌಡ ಎಂ.ಡಿ. ಅವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಸೂಪರಿಂಟೆಂಡೆಂಟ್ ಸಿ.ಎಸ್. ಪಾಟೀಲ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮಂಜುನಾಥ ಮೆಳ್ಳಿಗೇರಿ ಹಾಗೂ ಸಿಬ್ಬಂದಿ ಆರ್.ಎಂ. ನದಾಫ, ಸಂತೋಷ ದೊಡ್ಡಮನಿ, ಆರ್. ತಿಗಡಿ, ಆನಂದ ಪಾಟೀಲ, ವಿನಾಯಕ ಬೋರಣ್ನವರ ದಾಳಿಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>