<p><strong>ಚಿಕ್ಕೋಡಿ</strong>: ‘ತಂದೆ-ತಾಯಿ, ಗುರುವಿನ ಋಣ ಎಂದಿಗೂ ಮರೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಸರಳ ಸಾತ್ವಿಕ ಜೀವನ ನಡೆಸಿ ಆದರ್ಶಪ್ರಾಯರಾಗಬೇಕು. ಹಾಗಾದಲ್ಲಿ ಮಾತ್ರ ಸುಭದ್ರ ಸಮಾಜ ಕಟ್ಟಲು ಸಾಧ್ಯ’ ಎಂದು ಜೊಲ್ಲೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.</p>.<p>ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜೊಲ್ಲೆ ಶಿಕ್ಷಣ ಸಂಸ್ಥೆಯ ಬಸವಜ್ಯೋತಿ ಪದವಿ ಮಹಾವಿದ್ಯಾಲಯ, ಮೌಲಾನಾ ಅಬುಲ್ ಕಲಾಂ ಅಜಾದ್ ಬಿಎಸ್ಡಬ್ಲು/ಎಂಎಸ್ಡಬ್ಲು ಮಹಾವಿದ್ಯಾಲಯದ 204-25ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ನಮ್ಮ ಜೀವನ ಸರಳವಾಗಿರಬೇಕು. ಸರಳ ಜೀವನದಿಂದ ಬದುಕು ಸುಂದರವಾಗಿರುತ್ತದೆ. ಸುಂದರ ಬದುಕಿನಿಂದ ನೆಮ್ಮದಿಯು ಮನೆ ಮಾಡುತ್ತದೆ. ನೆಮ್ಮದಿಯಾಗಿದ್ದರೆ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಮಹಾವಿದ್ಯಾಲಯದ ಪ್ರಾಚಾರ್ಯ ಅಪ್ಪಾಸಾಹೇಬ ಅಕ್ಕೋಳೆ, ದೈಹಿಕ ಶಿಕ್ಷಣ ಪ್ರಾಧ್ಯಾಪಕ ತೋಂಬರೆ, ಪ್ರಿಯಾ ಭೋಜೆ, ಎಂ.ಎಂ.ಪಾಟೀಲ, ಮಿಥುನ ಅಂಕಲಿ, ಎಂ.ಎಂ.ಪೂಜಾರಿ, ರಾಕೇಶ ಮಗದುಮ್ಮ, ರವಿ ಕುರಬೆಟ್ಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ‘ತಂದೆ-ತಾಯಿ, ಗುರುವಿನ ಋಣ ಎಂದಿಗೂ ಮರೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಸರಳ ಸಾತ್ವಿಕ ಜೀವನ ನಡೆಸಿ ಆದರ್ಶಪ್ರಾಯರಾಗಬೇಕು. ಹಾಗಾದಲ್ಲಿ ಮಾತ್ರ ಸುಭದ್ರ ಸಮಾಜ ಕಟ್ಟಲು ಸಾಧ್ಯ’ ಎಂದು ಜೊಲ್ಲೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.</p>.<p>ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜೊಲ್ಲೆ ಶಿಕ್ಷಣ ಸಂಸ್ಥೆಯ ಬಸವಜ್ಯೋತಿ ಪದವಿ ಮಹಾವಿದ್ಯಾಲಯ, ಮೌಲಾನಾ ಅಬುಲ್ ಕಲಾಂ ಅಜಾದ್ ಬಿಎಸ್ಡಬ್ಲು/ಎಂಎಸ್ಡಬ್ಲು ಮಹಾವಿದ್ಯಾಲಯದ 204-25ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ನಮ್ಮ ಜೀವನ ಸರಳವಾಗಿರಬೇಕು. ಸರಳ ಜೀವನದಿಂದ ಬದುಕು ಸುಂದರವಾಗಿರುತ್ತದೆ. ಸುಂದರ ಬದುಕಿನಿಂದ ನೆಮ್ಮದಿಯು ಮನೆ ಮಾಡುತ್ತದೆ. ನೆಮ್ಮದಿಯಾಗಿದ್ದರೆ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಮಹಾವಿದ್ಯಾಲಯದ ಪ್ರಾಚಾರ್ಯ ಅಪ್ಪಾಸಾಹೇಬ ಅಕ್ಕೋಳೆ, ದೈಹಿಕ ಶಿಕ್ಷಣ ಪ್ರಾಧ್ಯಾಪಕ ತೋಂಬರೆ, ಪ್ರಿಯಾ ಭೋಜೆ, ಎಂ.ಎಂ.ಪಾಟೀಲ, ಮಿಥುನ ಅಂಕಲಿ, ಎಂ.ಎಂ.ಪೂಜಾರಿ, ರಾಕೇಶ ಮಗದುಮ್ಮ, ರವಿ ಕುರಬೆಟ್ಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>