<p><strong>ಹುಕ್ಕೇರಿ:</strong> ಸ್ಥಳೀಯ ದಿವಾಣಿ ನ್ಯಾಯಾಲಯದ ಹೆಚ್ಚುವರಿ ಚಾರ್ಜ್ ಅನ್ನು ಬದಲಾವಣೆ ಮಾಡುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಸ್ಥಳೀಯ ವಕೀಲರ ಸಂಘವು ಸೋಮವಾರ ಮನವಿ ಮಾಡಿದೆ.</p>.<p>ಸಂಘದ ಅಧ್ಯಕ್ಷ ಅನೀಸ್ ವಂಟಮೂರಿ ಮತ್ತು ಉಪಾಧ್ಯಕ್ಷ ಬಸವರಾಜ ಜಿನರಾಳಿ ಅವರು ಜಿಲ್ಲಾ ನ್ಯಾಯಾಧೀಶೆ ವಿಜಯಲಕ್ಷ್ಮೀದೇವಿ ಅವರಿಗೆ ಹುಕ್ಕೇರಿ ಹೆಚ್ಚುವರಿ ಚಾರ್ಜ್ ಅನ್ನು ಗೋಕಾಕ ನ್ಯಾಯಾಲಯಕ್ಕೆ ಕೊಟ್ಟಿರುವುದರಿಂದ ಇಲ್ಲಿನ ಕಕ್ಷಿದಾರರಿಗೆ ಮತ್ತು ವಕೀಲರಿಗೆ ಆಗುತ್ತಿರುವ ತೊಂದರೆಯನ್ನು ವಿವರಿಸಿದ್ದಾರೆ.</p>.<p>ಗೋಕಾಕ ಪಟ್ಟಣವು ಹುಕ್ಕೇರಿಯಿಂದ 33 ಕಿ.ಮೀ ಅಂತರದಲ್ಲಿ ಇರುವುದರಿಂದ ವಕೀಲರಿಗೆ ಮತ್ತು ಕಕ್ಷಿದಾರರಿಗೆ ಹೋಗಿ ಬರಲಿಕ್ಕೆ ಅನಾನುಕೂಲ ಆಗುತ್ತಿರುವುದರಿಂದ, ಚಾರ್ಜ್ ಅನ್ನು ಹುಕ್ಕೇರಿಯ ಹಿರಿಯ ದಿವಾಣಿ ನ್ಯಾಯಾಧೀಶರಿಗೆ ಕೊಡುವಂತೆ ಮನವಿ ಮಾಡಿದ್ದಾರೆ.</p>.<p>ಜಿಲ್ಲಾ ನ್ಯಾಯಾಧೀಶರು ಮನವಿಯನ್ನು ಪುರಸ್ಕರಿಸಿ, ಜರೂರಿಯಿದ್ದ ಮುಂದಿನ ಆದೇಶ ನೀಡಲು ಕೋರಿದ್ದಾರೆ.ಹಿರಿಯ ವಕೀಲರಾದ ಡಿ.ಕೆ.ಅವರಗೋಳ, ಭೀಮಸೇನ್ ಬಾಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ಸ್ಥಳೀಯ ದಿವಾಣಿ ನ್ಯಾಯಾಲಯದ ಹೆಚ್ಚುವರಿ ಚಾರ್ಜ್ ಅನ್ನು ಬದಲಾವಣೆ ಮಾಡುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಸ್ಥಳೀಯ ವಕೀಲರ ಸಂಘವು ಸೋಮವಾರ ಮನವಿ ಮಾಡಿದೆ.</p>.<p>ಸಂಘದ ಅಧ್ಯಕ್ಷ ಅನೀಸ್ ವಂಟಮೂರಿ ಮತ್ತು ಉಪಾಧ್ಯಕ್ಷ ಬಸವರಾಜ ಜಿನರಾಳಿ ಅವರು ಜಿಲ್ಲಾ ನ್ಯಾಯಾಧೀಶೆ ವಿಜಯಲಕ್ಷ್ಮೀದೇವಿ ಅವರಿಗೆ ಹುಕ್ಕೇರಿ ಹೆಚ್ಚುವರಿ ಚಾರ್ಜ್ ಅನ್ನು ಗೋಕಾಕ ನ್ಯಾಯಾಲಯಕ್ಕೆ ಕೊಟ್ಟಿರುವುದರಿಂದ ಇಲ್ಲಿನ ಕಕ್ಷಿದಾರರಿಗೆ ಮತ್ತು ವಕೀಲರಿಗೆ ಆಗುತ್ತಿರುವ ತೊಂದರೆಯನ್ನು ವಿವರಿಸಿದ್ದಾರೆ.</p>.<p>ಗೋಕಾಕ ಪಟ್ಟಣವು ಹುಕ್ಕೇರಿಯಿಂದ 33 ಕಿ.ಮೀ ಅಂತರದಲ್ಲಿ ಇರುವುದರಿಂದ ವಕೀಲರಿಗೆ ಮತ್ತು ಕಕ್ಷಿದಾರರಿಗೆ ಹೋಗಿ ಬರಲಿಕ್ಕೆ ಅನಾನುಕೂಲ ಆಗುತ್ತಿರುವುದರಿಂದ, ಚಾರ್ಜ್ ಅನ್ನು ಹುಕ್ಕೇರಿಯ ಹಿರಿಯ ದಿವಾಣಿ ನ್ಯಾಯಾಧೀಶರಿಗೆ ಕೊಡುವಂತೆ ಮನವಿ ಮಾಡಿದ್ದಾರೆ.</p>.<p>ಜಿಲ್ಲಾ ನ್ಯಾಯಾಧೀಶರು ಮನವಿಯನ್ನು ಪುರಸ್ಕರಿಸಿ, ಜರೂರಿಯಿದ್ದ ಮುಂದಿನ ಆದೇಶ ನೀಡಲು ಕೋರಿದ್ದಾರೆ.ಹಿರಿಯ ವಕೀಲರಾದ ಡಿ.ಕೆ.ಅವರಗೋಳ, ಭೀಮಸೇನ್ ಬಾಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>