<p class="rtejustify"><strong>ಬೆಳಗಾವಿ</strong>: ‘ಬೆಳಗಾವಿಯು ಗಡಿ ಜಿಲ್ಲೆ ಆಗಿರುವುದರಿಂದ ಲಾಕಡೌನ್ ವಿಸ್ತರಿಸುವ ಅಗತ್ಯವಿದೆ. ಜೂನ್ 10ರಂದು ನಡೆಯಲಿರುವ ಸಭೆಯಲ್ಲಿ ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p class="rtejustify">ಇಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಎಷ್ಟು ದಿನ ವಿಸ್ತರಿಸಬೇಕು ಎನ್ನುವುದನ್ನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ನಿರ್ಧರಿಸಲಾಗುವುದು’ ಎಂದರು.</p>.<p class="rtejustify">‘ಇತರ ಜಿಲ್ಲೆಗಳಿಗೆ ಹೋಲಿಸಿದರೆ ಬೆಳಗಾವಿ ಜಿಲ್ಲೆಯಲ್ಲಿ ವಿಭಿನ್ನ ಪರಿಸ್ಥಿತಿ ಇದೆ. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವುದರಿಂದಾಗಿ ಜನ ಸಂಪರ್ಕ ಇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಈ ವಿಷಯ ಸೂಕ್ಷ್ಮವಾಗಿ ಪರಿಗಣಿಸಿ ತೀರ್ಮಾನಿಸಬೇಕಾಗುತ್ತದೆ’ ಎಂದರು.</p>.<p class="rtejustify">‘ಜಿಲ್ಲೆಯಲ್ಲಿ 204 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ. 61 ಪ್ರಕರಣಗಳಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. 151 ಮಂದಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 32 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 15 ಮಂದಿ ಸಾವಿಗೀಡಾಗಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಬೆಳಗಾವಿ</strong>: ‘ಬೆಳಗಾವಿಯು ಗಡಿ ಜಿಲ್ಲೆ ಆಗಿರುವುದರಿಂದ ಲಾಕಡೌನ್ ವಿಸ್ತರಿಸುವ ಅಗತ್ಯವಿದೆ. ಜೂನ್ 10ರಂದು ನಡೆಯಲಿರುವ ಸಭೆಯಲ್ಲಿ ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p class="rtejustify">ಇಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಎಷ್ಟು ದಿನ ವಿಸ್ತರಿಸಬೇಕು ಎನ್ನುವುದನ್ನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ನಿರ್ಧರಿಸಲಾಗುವುದು’ ಎಂದರು.</p>.<p class="rtejustify">‘ಇತರ ಜಿಲ್ಲೆಗಳಿಗೆ ಹೋಲಿಸಿದರೆ ಬೆಳಗಾವಿ ಜಿಲ್ಲೆಯಲ್ಲಿ ವಿಭಿನ್ನ ಪರಿಸ್ಥಿತಿ ಇದೆ. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವುದರಿಂದಾಗಿ ಜನ ಸಂಪರ್ಕ ಇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಈ ವಿಷಯ ಸೂಕ್ಷ್ಮವಾಗಿ ಪರಿಗಣಿಸಿ ತೀರ್ಮಾನಿಸಬೇಕಾಗುತ್ತದೆ’ ಎಂದರು.</p>.<p class="rtejustify">‘ಜಿಲ್ಲೆಯಲ್ಲಿ 204 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ. 61 ಪ್ರಕರಣಗಳಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. 151 ಮಂದಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 32 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 15 ಮಂದಿ ಸಾವಿಗೀಡಾಗಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>