ತಾಲ್ಲೂಕಿನಲ್ಲಿ ನೂರಾರು ರೈತರು ಪಪ್ಪಾಯಿ ಬೆಳೆದಿದ್ದಾರೆ. ಮಹಾರಾಷ್ಟ್ರದ ಮುಂಬೈ ಹಾಗೂ ಪುಣೆ ಮೊದಲಾದ ಕಡೆಗಳಲ್ಲಿ ಈ ಹಣ್ಣುಗಳಿಗೆ ಬೇಡಿಕೆ ಇರುತ್ತಿತ್ತು. ಆದರೆ, ಕೊರೊನಾ ವೈರಾಣು ಹರಡುವ ಭೀತಿ ಹಾಗೂ ಲಾಕ್ಡೌನ್ನಿಂದಾಗಿ ಸಾಗಣೆ ನಿಂತಿದೆ. ಪರಿಣಾಮ, ರೈತರ ಆದಾಯಕ್ಕೆ ಪೆಟ್ಟು ಬಿದ್ದಿದೆ. ಕಾಯಿಗಳು ಹಣ್ಣಾಗಿ ಗಿಡದಲ್ಲೇ ಕೊಳೆಯುತ್ತಿರುವುದು ಅಥವಾ ಉದುರಿ ಬೀಳುತ್ತಿದ್ದು, ತಿಪ್ಪೆ ಪಾಲಾಗುತ್ತಿವೆ.