ಬೆಳಗಾವಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ಜಿಲ್ಲೆಯಾದ್ಯಂತ ನಡೆಸಿದ ಲೋಕ ಅದಾಲತ್ನಲ್ಲಿ ವಿವಿಧ 7,204 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹ 21.32 ಕೋಟಿ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲೂ ಪ್ರಕ್ರಿಯೆ ನಡೆದಿದೆ. ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶ ಆರ್.ಜೆ. ಸತೀಶ್ಸಿಂಗ್ ಸೇರಿದಂತೆ 69 ನ್ಯಾಯಾಧೀಶರು, ವಕೀಲರು ಮತ್ತು ಸಿಬ್ಬಂದಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. 26,859 ಪ್ರಕರಣಗಳನ್ನು ನಿಗದಿಪಡಿಸಲಾಗಿತ್ತು.
ಅದಾಲತ್ನ ವಿವರ
ವ್ಯಾಜ್ಯಗಳು; ಸಂಖ್ಯೆ; ಇತ್ಯರ್ಥವಾದವು; ಪರಿಹಾರ
ಬ್ಯಾಂಕಿಂಗ್; 550; 397; ₹ 3.17 ಕೋಟಿ
ಕ್ರಿಮಿನಲ್ ಕಂಪೌಂಡೇಬಲ್ ಅಫೆನ್ಸ್; 2000; 522; ₹ 66 ಲಕ್ಷ