ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕ ಅದಾಲತ್: ಪ್ರಕರಣಗಳ ಇತ್ಯರ್ಥ

Last Updated 19 ಡಿಸೆಂಬರ್ 2020, 13:22 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಶನಿವಾರ ಇಲ್ಲಿನ ಹೊಸ ನ್ಯಾಯಾಲಯ ಸಂಕೀರ್ಣದ ಎ.ಡಿ.ಆರ್. ಕಟ್ಟಡದಲ್ಲಿ ಬೃಹತ್ ಲೋಕ ಅದಾಲತ್ ನಡೆಯಿತು.

ಬೆಳಿಗ್ಗೆ 11ಕ್ಕೆ ಪ್ರಾರಂಭವಾದ ಅದಾಲತ್‌ನಲ್ಲಿ ನ್ಯಾಯಿಕ ಸಂಧಾನಕಾರರಾಗಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಸಿ.ಎಂ. ಜೋಶಿ ಮತ್ತು ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಭಾಗವಹಿಸಿ ಕಕ್ಷಿದಾರರ ಜೊತೆ ಸಮಾಲೋಚನೆ ನಡೆಸಿದರು. ಪರಸ್ಪರ ಒಪ್ಪಿಗೆ ಮೇರೆಗೆ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿದರು.

ಮಧ್ಯಾಹ್ನ 12ಕ್ಕೆ ಆರಂಭವಾದ ಅದಾಲತ್‌ನಲ್ಲಿ ನ್ಯಾಯಿಕ ಸಂಧಾನಕಾರರಾಗಿ ಮತ್ತು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ ಮತ್ತು ಸಂಧಾನಕಾರರಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭಾಗವಹಿಸಿದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ವಿಜಯ ದೇವರಾಜ್ ಅರಸ್, ಸಿಬ್ಬಂದಿ ಹಾಗೂ ವಕೀಲರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT