‘ಜಿಲ್ಲೆಯಲ್ಲಿ 1.24 ಲಕ್ಷ ಪ್ರಕರಣಗಳು ಇತ್ಯರ್ಥವಾಗಬೇಕಿದೆ. ಈ ಪೈಕಿ ಭೂಸ್ವಾಧೀನ ಪರಿಹಾರ, ಚೆಕ್ ಬೌನ್ಸ್, ಕೌಟುಂಬಿಕ ಸಮಸ್ಯೆ ಮತ್ತಿತರ ಪ್ರಕರಣಗಳನ್ನು ಅದಾಲತ್ನಲ್ಲಿ ಇತ್ಯರ್ಥಪಡಿಸಲು ಅವಕಾಶವಿದೆ. ಅಂತಹ 40ಸಾವಿರ ಪ್ರಕರಣಗಳನ್ನು ಗುರುತಿಸಲಾಗಿದೆ. ಹೆಚ್ಚಿನ ಪ್ರಕರಣಗಳನ್ನು ರಾಜಿ–ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಯತ್ನಿಸಲಾಗುವುದು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.