ಚಿಕ್ಕೋಡಿ: ‘ಸರ್ಕಾರದ ಯಾವೊಂದು ಯೋಜನೆಗಳಿಂದ ಫಲಾನುಭವಿಗಳು ವಂಚಿತ ಆಗಬಾರದು. ಹಾಗಾಗಿಯೇ ಕಳೆದ ಐದು ವರ್ಷಗಳಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ₹8,810 ಕೋಟಿ ಅನುದಾನವನ್ನು ತಂದು ಫಲಾನುಭವಿಗಳಿಗೆ ತಲುಪಿಸಿದ್ದಾರೆ’ ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದೆ ಕೂಡ ಇಂತಹ ಹತ್ತು ಹಲವು ಯೋಜನೆಗಳು ತಮ್ಮ ಮನೆ ಬಾಗಿಲಿಗೆ ಬರಬೇಕಾದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗೆಲ್ಲಿಸಿಕೊಂಡು ಬನ್ನಿ’ ಎಂದು ಕರೆ ನೀಡಿದರು.