‘ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್ ನೀಡಲಿದ್ದಾರೆ. ಸುಡು ಬಿಸಿಲಿನಲ್ಲಿ ಬೃಹತ್ ರ್ಯಾಲಿ ಮಾಡಿ ಕಾರ್ಯಕರ್ತರು ಹಾಗೂ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಂದೆ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಹೀಗಾಗಿ ತಂದೆಯವರ ಮಾರ್ಗದರ್ಶನದಂತೆ ನಡೆಯುತ್ತೇನೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.