‘ಕರಟಕ ದಮನಕ’ ಚಿತ್ರದ ಪ್ರಚಾರಕ್ಕೆ ಸೋಮವಾರ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಸಲ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವೆ. ಬಿಸಿಲು ಹೆಚ್ಚಿರುವ ಕಾರಣ ನಟರನ್ನು ಕರೆತರಲ್ಲ. ನಾನು ಕರೆದರೆ ಅವರೆಲ್ಲ ಬರುತ್ತಾರೆ. ಆದರೆ, ಯಾರಿಗೂ ತೊಂದರೆ ಕೊಡಲು ನನಗೆ ಇಷ್ಟವಿಲ್ಲ’ ಎಂದರು.