<p><strong>ಯಮಕನಮರಡಿ:</strong> ಮತದಾರರು ದೃಢ ನಿರ್ಧಾರ ಮಾಡಿ ಈ ಬಾರಿ ಕೈಗೆ ಶಕ್ತಿ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮನವಿ ಮಾಡಿದರು.</p>.<p>ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸೂರ, ಗುಗ್ರ್ಯಾನಟ್ಟಿ, ಭೂತರಮನಹಟ್ಟಿ, ಗೋಡಿವಾಳ, ಉಕ್ಕಡ-ರಾಮದುರ್ಗ, ಬೊಮ್ಮನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಬಿಜೆಪಿ ಕೊಟ್ಟ ಭರವಸೆ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಪ್ರತಿ ಮಹಿಳೆಯರಿಗೆ ₹1ಲಕ್ಷ ಕೊಡ್ತೇವೆ ಎಂದು ಈಗಾಗಲೇ ಮಲ್ಲಿಕಾಜರ್ುನ ಖರ್ಗೆ ಹಾಗೂ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಬಡವರ ದಲಿತರ ಬಗ್ಗೆ ಇರುವ ಕಾಳಜಿ’ ಎಂದರು.</p>.<p>ಪ್ರಚಾರದ ವೇಳೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮಹಿಳೆಯರು ಆರತಿ ಎತ್ತಿ, ಹೂ ಮಾಲೆ ಹಾಕಿ ಸನ್ಮಾನಿಸಿದರು. ಗ್ರಾಮದ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಮಕನಮರಡಿ:</strong> ಮತದಾರರು ದೃಢ ನಿರ್ಧಾರ ಮಾಡಿ ಈ ಬಾರಿ ಕೈಗೆ ಶಕ್ತಿ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮನವಿ ಮಾಡಿದರು.</p>.<p>ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸೂರ, ಗುಗ್ರ್ಯಾನಟ್ಟಿ, ಭೂತರಮನಹಟ್ಟಿ, ಗೋಡಿವಾಳ, ಉಕ್ಕಡ-ರಾಮದುರ್ಗ, ಬೊಮ್ಮನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಬಿಜೆಪಿ ಕೊಟ್ಟ ಭರವಸೆ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಪ್ರತಿ ಮಹಿಳೆಯರಿಗೆ ₹1ಲಕ್ಷ ಕೊಡ್ತೇವೆ ಎಂದು ಈಗಾಗಲೇ ಮಲ್ಲಿಕಾಜರ್ುನ ಖರ್ಗೆ ಹಾಗೂ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಬಡವರ ದಲಿತರ ಬಗ್ಗೆ ಇರುವ ಕಾಳಜಿ’ ಎಂದರು.</p>.<p>ಪ್ರಚಾರದ ವೇಳೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮಹಿಳೆಯರು ಆರತಿ ಎತ್ತಿ, ಹೂ ಮಾಲೆ ಹಾಕಿ ಸನ್ಮಾನಿಸಿದರು. ಗ್ರಾಮದ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>