ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತೂರಿಗೆ ಕಾಗೇರಿ ಇಂದು; ವಿಜಯೇಂದ್ರ ನಾಳೆ

Published 3 ಮೇ 2024, 0:27 IST
Last Updated 3 ಮೇ 2024, 0:27 IST
ಅಕ್ಷರ ಗಾತ್ರ

ಚನ್ನಮ್ಮನ ಕಿತ್ತೂರು: ‘ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮೇ 3 ರಂದು ಕಿತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಚುನಾವಣೆ ಪ್ರಚಾರ ಸಭೆ ನಡೆಸಲಿದ್ದಾರೆ’ ಎಂದು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ತಿಳಿಸಿದರು.

ಗುರುವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಅಂದು ಬೆಳಿಗ್ಗೆ 10ಕ್ಕೆ ದೇಶನೂರ ಗ್ರಾಮದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ನಂತರ ನಾಗನೂರು, ಹಣ್ಣಿಕೇರಿ, ತಿಗಡಿ, ಚಿಕ್ಕಬಾಗೇವಾಡಿಯಲ್ಲಿ ಪ್ರಚಾರ ಸಭೆ ನಡೆಸಿ ಸಂಜೆ 4 ಗಂಟೆಗೆ ಎಂ.ಕೆ.ಹುಬ್ಬಳ್ಳಿಗೆ ಆಗಮಿಸಿ ಪ್ರಚಾರ ಸಭೆ ನಡೆಸುವರು. ನಂತರ ಕಾದವರಳ್ಳಿ, ಅವರಾದಿ, ದೇಗಾಂವ ಗ್ರಾಮಗಳಲ್ಲಿ ಪ್ರಚಾರ ಕಾರ್ಯಕ್ರಮ ನಡೆಯಲಿದೆ’ ಎಂದರು.

‘ಮೇ 4 ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3ಕ್ಕೆ ಕಿತ್ತೂರಿಗೆ ಆಗಮಿಸುವರು. ಗುರುವಾರ ಪೇಟೆಯ ಚನ್ನಮ್ಮ ವರ್ತುಲದಿಂದ ಬೈಕ್ ಜಾಥಾ ಆಯೋಜಿಸಲಾಗಿದ್ದು,  ನೂರಾರು ಯುವಕರು ಭಾಗವಹಿಸುವರು. ನಂತರ ಕೋಟೆಯ ಮುಖ್ಯದ್ವಾರದ ಮುಂದೆ ಬಹಿರಂಗ ಚುನಾವಣಾ ಪ್ರಚಾರ ಸಭೆ ನಡೆಯಲಿದೆ’ ಎಂದರು.

ಮಂಡಳ ಅಧ್ಯಕ್ಷ ಡಾ.ಬಸವರಾಜ ಪರವಣ್ಣವರ, ಮುಖಂಡರಾದ ಲಕ್ಷ್ಮಿ ಇನಾಮದಾರ, ಜೆಡಿಎಸ್ ಪಕ್ಷದ ಎಂ. ವೈ. ಸೋಮಣ್ಣವರ, ಬಸನಗೌಡ ಸಿದ್ರಾಮನಿ, ಶ್ರೀಕರ ಕುಲಕರ್ಣಿ, ಸಂದೀಪ ದೇಶಪಾಂಡೆ, ಈರಣ್ಣ ವಾರದ, ಬಸವರಾಜ ಮಾತನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT