ದೆಹಲಿ: ಕೆಲ ದಿನಗಳ ಹಿಂದಷ್ಟೇ ಭಾರಿ ಮಳೆ ಮತ್ತು ಬಿರುಗಾಳಿಗೆ ನಲುಗಿದ್ದ ದೆಹಲಿಯಲ್ಲಿ ಬುಧವಾರವೂ ದೂಳಿನಿಂದ ಕೂಡಿದ ಬಿರುಗಾಳಿ ಬೀಸಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ನಸುಕಿನ ಜಾವ ಬೀಸಿದ ಬಿರುಗಾಳಿಯಿಂದಾಗಿ ಹತ್ತಾರು ಮರಗಳು ಧರೆಗುರುಳಿವೆ. ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅದೃಷ್ಟವಶಾತ್, ಸಾವು–ನೋವು ಸಂಭವಿಸಿಲ್ಲ.
ಭಾನುವಾರ ರಾತ್ರಿ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ದೆಹಲಿ ಮತ್ತು ಆಂಧ್ರ ಪ್ರದೇಶಗಳಲ್ಲಿ ಭಾರಿ ಮಳೆ, ಬಿರುಗಾಳಿ ಮತ್ತು ಸಿಡಿಲಿಗೆ 50ಕ್ಕೂ ಹೆಚ್ಚು ಜನ ಮೃತಪಟ್ಟು, 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.