<p><strong>ಬೆಳಗಾವಿ:</strong> ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಚೌಶೆಟ್ಟಿ ಉದ್ಯಮಿಯೊಬ್ಬರಿಂದ ₹25 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p><p>ವಿಕಾಸ ಕಂಪೋಸಿಟ್ಸ್ ಸಂಸ್ಥೆಯ ವ್ಯವಸ್ಥಾಪಕ ವಿಕಾಸ ಪ್ರಮೋದ ಕೋಕಣೆ ನೀಡಿದ ದೂರು ಆಧರಿಸಿ ಲೊಕಾಯುಕ್ತ ಎಸ್ಪಿ ಹನುಮಂತರಾಯ ಮತ್ತು ಇನ್ಸ್ಪೆಕ್ಟರ್ ನಿರಂಜನ ಪಾಟೀಲ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.</p><p>‘ವಿಕಾಸ ಅವರು ತಮ್ಮ ಸಂಸ್ಥೆಯಿಂದ ಪೂರೈಸಲಾದ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ‘ಸಿ’ ಫಾರ್ಮ್ ಪಡೆದು ರಾಜ್ಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಗೆ ಸಲ್ಲಿಸದ ಕಾರಣ, ಇಲಾಖೆಯಿಂದ ಕಂಪನಿಗೆ ಜಪ್ತಿ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಕಾಸ ಅವರು ಸಂಸ್ಥೆಯಿಂದ ಜಿಎಸ್ಟಿ ಮೊತ್ತ ₹41 ಸಾವಿರ ಕಟ್ಟಿದ್ದರು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p><p>‘ಈ ಹಣವನ್ನು ಮರಳಿ ಪಡೆಯಲು (ರಿಫಂಡ್) ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪಡೆಯಲು ₹25 ಸಾವಿರ ಲಂಚಕ್ಕೆ ಆಯುಕ್ತೆ ದಾಕ್ಷಾಯಿಣಿ ಬೇಡಿಕೆ ಇಟ್ಟದ್ದರು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಚೌಶೆಟ್ಟಿ ಉದ್ಯಮಿಯೊಬ್ಬರಿಂದ ₹25 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p><p>ವಿಕಾಸ ಕಂಪೋಸಿಟ್ಸ್ ಸಂಸ್ಥೆಯ ವ್ಯವಸ್ಥಾಪಕ ವಿಕಾಸ ಪ್ರಮೋದ ಕೋಕಣೆ ನೀಡಿದ ದೂರು ಆಧರಿಸಿ ಲೊಕಾಯುಕ್ತ ಎಸ್ಪಿ ಹನುಮಂತರಾಯ ಮತ್ತು ಇನ್ಸ್ಪೆಕ್ಟರ್ ನಿರಂಜನ ಪಾಟೀಲ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.</p><p>‘ವಿಕಾಸ ಅವರು ತಮ್ಮ ಸಂಸ್ಥೆಯಿಂದ ಪೂರೈಸಲಾದ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ‘ಸಿ’ ಫಾರ್ಮ್ ಪಡೆದು ರಾಜ್ಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಗೆ ಸಲ್ಲಿಸದ ಕಾರಣ, ಇಲಾಖೆಯಿಂದ ಕಂಪನಿಗೆ ಜಪ್ತಿ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಕಾಸ ಅವರು ಸಂಸ್ಥೆಯಿಂದ ಜಿಎಸ್ಟಿ ಮೊತ್ತ ₹41 ಸಾವಿರ ಕಟ್ಟಿದ್ದರು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p><p>‘ಈ ಹಣವನ್ನು ಮರಳಿ ಪಡೆಯಲು (ರಿಫಂಡ್) ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪಡೆಯಲು ₹25 ಸಾವಿರ ಲಂಚಕ್ಕೆ ಆಯುಕ್ತೆ ದಾಕ್ಷಾಯಿಣಿ ಬೇಡಿಕೆ ಇಟ್ಟದ್ದರು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>