ಲೋಕಾಯುಕ್ತ ಡಿವೈಎಸ್ಪಿ ಬಿ.ಎಸ್.ಪಾಟೀಲ ನೇತೃತ್ವದಲ್ಲಿ ತಂಡವು ದಾಳಿ ಮಾಡಿದ್ದು, ಪರಿಶೀಲನೆ ಮುಂದುವರಿಸಿದೆ.
ಶೇಖರ ಅವರು ಪ್ರಸ್ತುತ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ‘ಹೆಸ್ಕಾಂ’ ಚಿಕ್ಕೋಡಿ ಉಪವಿಭಾಗದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದರು.
2019ರ ಪ್ರವಾಹ ಸಂದರ್ಭದಲ್ಲಿ ರೈತರಿಗೆ ಹಾಗೂ ಗ್ರಾಮಸ್ಥರಿಗೆ ಆದ ಪ್ರವಾಹ ಪರಿಹಾರ ವಿತರಣೆಯಲ್ಲಿ ಅಕ್ರಮ ಎಸಗಿದ ಆರೋಪ ಅವರ ಮೇಲೆ ಕೇಳಿಬಂದಿತ್ತು. ಇದರಿಂದ ಅಮಾನತುಗೊಂಡಿದ್ದರು.
₹ 86 ಕೋಟಿಯ ಹಗರಣಕ್ಕೆ ಸಂಬಂಧಿಸಿದಂತೆ ಆಗ ‘ಹೆಸ್ಕಾಂ’ನ ಐವರು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ 20 ಸಿಬ್ಬಂದಿ ಅಮಾನತು ಮಾಡಲಾಗಿತ್ತು. ಇದೇ ಪ್ರಕರಣದಲ್ಲಿ ಶೇಖರ ಕೂಡ ಮುಖ್ಯ ಆರೋಪಿ ಆಗಿದ್ದರು.