<p><strong>ಬೆಳಗಾವಿ</strong>: ಬೆಳಗಾವಿ: ಭೂ ಪರಿವರ್ತನೆ ಮಾಡಿಕೊಡಲು ₹40 ಸಾವಿರ ಲಂಚ ಪಡೆಯುತ್ತಿದ್ದ ವೇಳೆ, ಬೆಳಗಾವಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಗ್ರೇಡ್–2 ಕಾರ್ಯದರ್ಶಿ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.</p> .<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮರೆಡ್ಡಿ ಪಾಟೀಲ ಹಾಗೂ ಗ್ರೇಡ್–2 ಕಾರ್ಯದರ್ಶಿ ವೈಜನಾಥ ಸನದಿ ಬಂಧಿತರು. ಇಬ್ಬರೂ ಲಂಚದ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ ಲೋಕಾಯುಕ್ತ ಎಸ್ಪಿ ಹಣಮಂತರಾಯ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ನಗರದ ಕಾಕತಿವೇಸ್ ಪ್ರದೇಶದ ನಿವಾಸಿ ಶಾನವಾಜ್ಖಾನ್ ಪಠಾಣ (52) ಅವರು ತಮ್ಮ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ರಾಮರೆಡ್ಡಿ ₹40 ಸಾವಿರ ಲಂಚ ಕೇಳಿದ್ದರು. ಶಾನವಾಜ್ಖಾನ್ ಅವರನ್ನು ಹಲವು ದಿನಗಳಿಂದ ಪದೇಪದೇ ಕಚೇರಿಗೆ ಅಲೆದಾಡಿಸಿದ್ದರು.</p><p>ಶಾನವಾಜ್ಖಾನ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಪೂರ್ವ ಯೋಜನೆಯಂತೆ ಶಾನವಾಜ್ಖಾನ್ ಅವರು ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬಂದು ಅಧಿಕಾರಿಗಳ ಕೈಗೆ ಲಂಚದ ಹಣ ಕೊಟ್ಟರು. ಆಗ ದಾಳಿ ಮಾಡಿದ ಇನ್ಸ್ಪೆಕ್ಟರ್ ಅನ್ನಪೂರ್ಣ ಹುಲಗೂರು ಅವರು ಆರೋಪಿಗಳನ್ನು ಬಂಧಿಸಿದರು.</p><p>‘ಇಬ್ಬರೂ ಆರೋಪಿಗಳ ಮನೆಗಳ ಮೇಲೂ ದಾಳಿ ಮಾಡಿ, ಹುಡುಕಾಟ ನಡೆಸಲಾಗಿದೆ. ಇನ್ನಷ್ಟು ಅಕ್ರಮಗಳು ಹೊರಬೀಳುವ ಸಾಧ್ಯತೆ ಇದೆ. ತನಿಖೆ ಮುಂದುರಿದಿದೆ’ ಎಂದೂ ಹಣಮಂತರಾಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಬೆಳಗಾವಿ: ಭೂ ಪರಿವರ್ತನೆ ಮಾಡಿಕೊಡಲು ₹40 ಸಾವಿರ ಲಂಚ ಪಡೆಯುತ್ತಿದ್ದ ವೇಳೆ, ಬೆಳಗಾವಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಗ್ರೇಡ್–2 ಕಾರ್ಯದರ್ಶಿ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.</p> .<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮರೆಡ್ಡಿ ಪಾಟೀಲ ಹಾಗೂ ಗ್ರೇಡ್–2 ಕಾರ್ಯದರ್ಶಿ ವೈಜನಾಥ ಸನದಿ ಬಂಧಿತರು. ಇಬ್ಬರೂ ಲಂಚದ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ ಲೋಕಾಯುಕ್ತ ಎಸ್ಪಿ ಹಣಮಂತರಾಯ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ನಗರದ ಕಾಕತಿವೇಸ್ ಪ್ರದೇಶದ ನಿವಾಸಿ ಶಾನವಾಜ್ಖಾನ್ ಪಠಾಣ (52) ಅವರು ತಮ್ಮ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ರಾಮರೆಡ್ಡಿ ₹40 ಸಾವಿರ ಲಂಚ ಕೇಳಿದ್ದರು. ಶಾನವಾಜ್ಖಾನ್ ಅವರನ್ನು ಹಲವು ದಿನಗಳಿಂದ ಪದೇಪದೇ ಕಚೇರಿಗೆ ಅಲೆದಾಡಿಸಿದ್ದರು.</p><p>ಶಾನವಾಜ್ಖಾನ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಪೂರ್ವ ಯೋಜನೆಯಂತೆ ಶಾನವಾಜ್ಖಾನ್ ಅವರು ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬಂದು ಅಧಿಕಾರಿಗಳ ಕೈಗೆ ಲಂಚದ ಹಣ ಕೊಟ್ಟರು. ಆಗ ದಾಳಿ ಮಾಡಿದ ಇನ್ಸ್ಪೆಕ್ಟರ್ ಅನ್ನಪೂರ್ಣ ಹುಲಗೂರು ಅವರು ಆರೋಪಿಗಳನ್ನು ಬಂಧಿಸಿದರು.</p><p>‘ಇಬ್ಬರೂ ಆರೋಪಿಗಳ ಮನೆಗಳ ಮೇಲೂ ದಾಳಿ ಮಾಡಿ, ಹುಡುಕಾಟ ನಡೆಸಲಾಗಿದೆ. ಇನ್ನಷ್ಟು ಅಕ್ರಮಗಳು ಹೊರಬೀಳುವ ಸಾಧ್ಯತೆ ಇದೆ. ತನಿಖೆ ಮುಂದುರಿದಿದೆ’ ಎಂದೂ ಹಣಮಂತರಾಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>