ಮುಖ್ಯಮಂತ್ರಿ ಪ್ರವಾಸ ಹಿನ್ನೆಲೆಯಲ್ಲಿ ಬಿಮ್ಸ್ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಕೆಲವು ವೈದ್ಯರಿಗೆ ನೋಟಿಸ್ ಕೊಡಲಾಗಿದ್ದು 24 ಗಂಟೆಗಳಲ್ಲಿ ವಿವರಣೆ ಕೇಳಲಾಗಿತ್ತು. ಆದರೆ, ಗಡುವು ಮುಗಿದರೂ ಉತ್ತರ ಬಂದಿಲ್ಲ ಎನ್ನಲಾಗುತ್ತಿದೆ. ಆಸ್ಪತ್ರೆಯಲ್ಲಿ ತಮಗೆ ನಿರ್ಬಂಧ ವಿಧಿಸಿರುವುದು ಕೂಡ ರೋಗಿಗಳ ಸಹಾಯಕರ (ಅಟೆಂಡರ್) ಅಸಮಾಧಾನಕ್ಕೆ ಕಾರಣವಾಗುತ್ತಿದೆ. ಅಲ್ಲಿನ ಸಿಬ್ಬಂದಿ ರೋಗಿಗಳನ್ನು ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎನ್ನುವ ದೂರುಗಳು ಕೂಡ ಅವರಿಂದ ಬರುತ್ತಿವೆ. ಭದ್ರತಾ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸುವುದು ಸಾಮಾನ್ಯವಾಗಿದೆ.