‘ಕಾಂಗ್ರೆಸ್ ನಾಯಕರು ಮೋದಿ ವಿರುದ್ಧ ಮಾತನಾಡಿದ್ದರಿಂದಲೆ, ದೇಶದ ಜನರಿಗೆ ಆ ಪಕ್ಷದ ಬಗ್ಗೆ ತಿರಸ್ಕಾರದ ಭಾವನೆ ಬಂದಿದೆ. ಈ ಕಾರಣದಿಂದಾಗಿಯೇ ಸಿದ್ದರಾಮಯ್ಯ ಅವರನ್ನು ಮೈಸೂರು ಜನರು ತಿರಸ್ಕರಿಸಿ ಅಲ್ಲಿಂದ ಓಡಿಸಿದ್ದಾರೆ. ಉತ್ತರ ಕರ್ನಾಟಕದ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಆಯ್ಕೆಯಾಗಬೇಕಾದ ಸಂದರ್ಭ ಬಂತು. ಹೀಗಿದ್ದರೂ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಕನಸು ಕಾಣುವುದನ್ನು ಸಿದ್ದರಾಮಯ್ಯ ಬಿಟ್ಟಿಲ್ಲ’ ಎಂದು ವ್ಯಂಗ್ಯವಾಡಿದರು.