ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಆಗುವುದರೊಳಗೆ ಮಾಡಿಕೊಡಿ: ಅಚ್ಚರಿ ಮೂಡಿಸಿದ ಝಿರಲಿ ಹೇಳಿಕೆ

Last Updated 6 ಫೆಬ್ರುವರಿ 2021, 11:53 IST
ಅಕ್ಷರ ಗಾತ್ರ

ಬೆಳಗಾವಿ: ನೀವು ಮುಖ್ಯಮಂತ್ರಿ ಆಗುವುದರೊಳಗೆ ಈ ಕೆಲಸಗಳನ್ನು ಮಾಡಿಕೊಡಿ.

ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅವರಿಗೆ ಬಿಜೆಪಿ ರಾಜ್ಯ ಘಟಕದ ವಕ್ತಾರರೂ ಆಗಿರುವ ವಕೀಲ ಎಂ.ಬಿ. ಝಿರಲಿ ಅವರು ಹೀಗೆ ಕೋರಿದ್ದು ಅಚ್ಚರಿ ಮೂಡಿಸಿತು.

ಶನಿವಾರ ಇಲ್ಲಿನ ವಕೀಲರ ಸಂಘಕ್ಕೆ ಭೇಟಿ ನೀಡಿ ಸಚಿವರಿಗೆ, ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಆಗ, ಸಭಿಕರ ಸಾಲಿನಲ್ಲಿ ಕುಳಿತಿದ್ದ ಝಿರಲಿ ಮೇಲಿನಂತೆ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಝಿರಲಿ, ‘ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿರುವ ಕತ್ತಿ ಅವರು, ಸಮಗ್ರ ಕರ್ನಾಟಕದ ಗಟ್ಟಿ ಧ್ವನಿಯಾಗಬೇಕು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕೂಗು ಮೊಳಗಿಸಬೇಕು. ವಕೀಲರಾದ ನಾವೂ ದನಿಗೂಡಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT