ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಅಬಕಾರಿ ಇಲಾಖೆ ಉಪ ಆಯುಕ್ತರು, ಸಹಕಾರ ಸಂಘಗಳ ಉಪನಿಬಂಧಕರು, ಡಿವೈಎಸ್ಪಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಾನೂನು ಮಾಪನಾ ಶಾಸ್ತ್ರ ಇಲಾಖೆ ಅಧಿಕಾರಿ, ವಾಣಿಜ್ಯ ತೆರಿಗೆ ಅಧಿಕಾರಿ ಸೇರಿದಂತೆ ರೈತಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಚೂನಪ್ಪಾ ಪೂಜೇರಿ ಹಾಗೂ ಸದಸ್ಯ ಸುಭಾಷ ಶಿರಬೂರ ಒಳಗೊಂಡ ಪರಿಶೀಲನಾ ತಂಡ ರಚಿಸಬೇಕು. ಬಿಲ್ ಮೊತ್ತ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.