‘ಕೇಂದ್ರ ಸರ್ಕಾರ ಮೀಸಲಾತಿ ವ್ಯವಸ್ಥೆಯನ್ನೇ ಕಿತ್ತಿಹಾಕಲು ಮುಂದಾಗುತ್ತಿರುವುದು ನಿಜಕ್ಕೂ ಖಂಡನೀಯ. ರೈಲ್ವೆ ಇಲಾಖೆ, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಮುಂದಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಂಡಾಂತರ ತರಲಿದೆ. ಹಿಂದುಳಿದ ವರ್ಗಗಳ ಮುನ್ನಡೆಗೆ ಅಡ್ಡಿ ಉಂಟು ಮಾಡಲಿದೆ. ಹೀಗಾಗಿ, ಜಾಗೃತರಾಗಿ ಹೋರಾಡಬೇಕು’ ಎಂದು ತಿಳಿಸಿದರು.