<p><strong>ಬೆಳಗಾವಿ:</strong> ಇಲ್ಲಿ ಶನಿವಾರ ಆಯೋಜಿಸಿದ್ದ ಮಾಜಿ ಸೈನಿಕರ ರ್ಯಾಲಿಯು, ಮದ್ರಾಸ್ ರೆಜಿಮೆಂಟ್ ಅಡಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದವರು ಮತ್ತು ಅವರ ಕುಟುಂಬದವರ ಸಮಸ್ಯೆಗಳ ಪರಿಹಾರಕ್ಕೆ ವೇದಿಕೆ ಕಲ್ಪಿಸಿತು.</p>.<p>ಬೆಳಗಾವಿ, ಧಾರವಾಡ, ಗದಗ ಮತ್ತು ವಿಜಯಪುರ ಜಿಲ್ಲೆಗಳ 1,233 ಮಾಜಿ ಸೈನಿಕರು, ಅವರ ಕುಟುಂಬದವರು ಮತ್ತು ಹುತಾತ್ಮ ಯೋಧರ ಪತ್ನಿಯರು ರ್ಯಾಲಿಗೆ ಆಗಮಿಸಿದ್ದರು.</p>.<p>ಯೋಗಕ್ಷೇಮ ವಿಚಾರಿಸುವ ಜತೆಗೆ, ಅವರ ಕುಂದುಕೊರತೆ ಆಲಿಸಲಾಯಿತು. ಲಭ್ಯವಿರುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ವಿವರಿಸಲಾಯಿತು. </p>.<p>ಬ್ಯಾಂಕಿಂಗ್ ಮತ್ತು ವಿವಿಧ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆ ಪರಿಹರಿಸಲಾಯಿತು. ಹುತಾತ್ಮ ಯೋಧರ ಪತ್ನಿಯರನ್ನು ಸನ್ಮಾನಿಸಲಾಯಿತು. </p>.<p>ಮದ್ರಾಸ್ ರೆಜಿಮೆಂಟಲ್ ಸೆಂಟರ್–ವೆಲ್ಲಿಂಗ್ಟನ್ನ ಕಮಾಂಡೆಂಟ್ ಬ್ರಿಗೇಡಿಯರ್ ಕೃಷ್ಣೆಂದು ದಾಸ, ‘ರಾಷ್ಟ್ರಕ್ಕಾಗಿ ಉತ್ತಮ ಸೇವೆ ನೀಡಿದ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಏನೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತರಬೇಕು. ನಾವು ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ’ ಎಂದು ಹೇಳಿದರು.</p>.<p>ಮದ್ರಾಸ್ ರೆಜಿಮೆಂಟಲ್ ಸೆಂಟರ್–ವೆಲ್ಲಿಂಗ್ಟನ್ನ ರೆಕಾರ್ಡ್ಸ್ ವಿಭಾಗದ ಚೀಫ್ ರೆಕಾರ್ಡ್ಸ್ ಆಫೀಸರ್ ಲೆಫ್ಟಿನೆಂಟ್ ಕರ್ನಲ್ ಕಲಾಮ್ ಸಿಂಗ್ ಸ್ವಾಗತಿಸಿದರು.</p>.<p>ವಿವಿಧ ಆಸ್ಪತ್ರೆಗಳ ವೈದ್ಯರ ತಂಡಗಳು 689 ಜನರ ಆರೋಗ್ಯ ತಪಾಸಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿ ಶನಿವಾರ ಆಯೋಜಿಸಿದ್ದ ಮಾಜಿ ಸೈನಿಕರ ರ್ಯಾಲಿಯು, ಮದ್ರಾಸ್ ರೆಜಿಮೆಂಟ್ ಅಡಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದವರು ಮತ್ತು ಅವರ ಕುಟುಂಬದವರ ಸಮಸ್ಯೆಗಳ ಪರಿಹಾರಕ್ಕೆ ವೇದಿಕೆ ಕಲ್ಪಿಸಿತು.</p>.<p>ಬೆಳಗಾವಿ, ಧಾರವಾಡ, ಗದಗ ಮತ್ತು ವಿಜಯಪುರ ಜಿಲ್ಲೆಗಳ 1,233 ಮಾಜಿ ಸೈನಿಕರು, ಅವರ ಕುಟುಂಬದವರು ಮತ್ತು ಹುತಾತ್ಮ ಯೋಧರ ಪತ್ನಿಯರು ರ್ಯಾಲಿಗೆ ಆಗಮಿಸಿದ್ದರು.</p>.<p>ಯೋಗಕ್ಷೇಮ ವಿಚಾರಿಸುವ ಜತೆಗೆ, ಅವರ ಕುಂದುಕೊರತೆ ಆಲಿಸಲಾಯಿತು. ಲಭ್ಯವಿರುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ವಿವರಿಸಲಾಯಿತು. </p>.<p>ಬ್ಯಾಂಕಿಂಗ್ ಮತ್ತು ವಿವಿಧ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆ ಪರಿಹರಿಸಲಾಯಿತು. ಹುತಾತ್ಮ ಯೋಧರ ಪತ್ನಿಯರನ್ನು ಸನ್ಮಾನಿಸಲಾಯಿತು. </p>.<p>ಮದ್ರಾಸ್ ರೆಜಿಮೆಂಟಲ್ ಸೆಂಟರ್–ವೆಲ್ಲಿಂಗ್ಟನ್ನ ಕಮಾಂಡೆಂಟ್ ಬ್ರಿಗೇಡಿಯರ್ ಕೃಷ್ಣೆಂದು ದಾಸ, ‘ರಾಷ್ಟ್ರಕ್ಕಾಗಿ ಉತ್ತಮ ಸೇವೆ ನೀಡಿದ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಏನೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತರಬೇಕು. ನಾವು ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ’ ಎಂದು ಹೇಳಿದರು.</p>.<p>ಮದ್ರಾಸ್ ರೆಜಿಮೆಂಟಲ್ ಸೆಂಟರ್–ವೆಲ್ಲಿಂಗ್ಟನ್ನ ರೆಕಾರ್ಡ್ಸ್ ವಿಭಾಗದ ಚೀಫ್ ರೆಕಾರ್ಡ್ಸ್ ಆಫೀಸರ್ ಲೆಫ್ಟಿನೆಂಟ್ ಕರ್ನಲ್ ಕಲಾಮ್ ಸಿಂಗ್ ಸ್ವಾಗತಿಸಿದರು.</p>.<p>ವಿವಿಧ ಆಸ್ಪತ್ರೆಗಳ ವೈದ್ಯರ ತಂಡಗಳು 689 ಜನರ ಆರೋಗ್ಯ ತಪಾಸಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>