ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಯೋಜನೆ ಮುಂದುವರಿಸುತ್ತೇವೆ: ಜೋಶಿ

Last Updated 6 ಅಕ್ಟೋಬರ್ 2020, 18:08 IST
ಅಕ್ಷರ ಗಾತ್ರ

ಬೆಳಗಾವಿ: ‘ನನ್ನ ಪ್ರಕಾರ ಮಹದಾಯಿ ವಿವಾದ ತಾರ್ಕಿಕ‌ ಅಂತ್ಯ ಕಂಡಿದೆ. ನ್ಯಾಯಮಂಡಳಿ ತೀರ್ಪಿನ ಪ್ರಕಾರ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರು ಪಡೆಯಲು ಕ್ರಮ ವಹಿಸಲಾಗಿದೆ. ಕೇಂದ್ರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಯೋಜನೆ
ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ₹ 500 ಕೋಟಿ ಮೀಸಲಿಟ್ಟಿದೆ. ಯಾವುದೇ ಯೋಜನೆಗೆ ಪರಿಸರ ಅನುಮತಿ ಕಡ್ಡಾಯ. ಹೀಗಾಗಿ, ರಾಜ್ಯ ಸರ್ಕಾರದಿಂದ ಅನುಮತಿ ಕೋರಲಾಗಿದೆ’ ಎಂದುಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಗೋವಾ: ಪಣಜಿ (ಪಿಟಿಐ): ‘ಮಹದಾಯಿ ವಿವಾದ ಕೋರ್ಟ್‌ನಲ್ಲಿದ್ದರೂ ನದಿ ನೀರು ಹರಿಯುವ ದಿಕ್ಕು ಬದಲಿಸಲು ಕರ್ನಾಟಕ ಯತ್ನಿಸುತ್ತಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಸಲ್ಲಿಸಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT