ಕರ್ನಾಟಕವು ಈಗಾಗಲೇ ಕಳಸಾ ನೀರನ್ನು ತಿರುಗಿಸಿಕೊಂಡಿದೆ ಎಂಬ ಗೋವಾದ ಆರೋಪದ ಹಿನ್ನೆಲೆಯಲ್ಲಿ ಜಂಟಿ ಸಮಿತಿಯ ಪರಿಶೀಲನೆಗೆ ಹಾಗೂ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಆದೇಶ ನೀಡಿತ್ತು. ಕರ್ನಾಟಕದ ನವಿಲುತೀರ್ಥ ಅಣೆಕಟ್ಟಿನ ಸೂಪರಿಂಟೆಂಡಿಂಗ್ ಎಂಜಿನಿಯರ್ ಕೃಷ್ಣೋಜಿರಾವ್, ಗೋವಾದಿಂದ ಸೂಪರಿಂಟೆಂಡಿಂಗ್ ಎಂಜಿನಿಯರ್ ಎಂ.ಕೆ. ಪ್ರಸಾದ್ ಮತ್ತು ಮಹಾರಾಷ್ಟ್ರದಿಂದ ಶ್ರೀಥೋರಟ್ ಸಮಿತಿಯಲ್ಲಿದ್ದಾರೆ.