‘ರಾಜ್ಯದ ನಿಲುವುಗಳ ರೀತಿಯೇ ಪಕ್ಷದ ನಿಲುವುಗಳು ಕೂಡ ಬೇರೆ ಇರುತ್ತವೆ. ರಾಜಕೀಯವಾಗಿ ಸೀಟು ಹೊಂದಾಣಿಕೆ ಅಥವಾ ಮೈತ್ರಿ ಸಂದರ್ಭದಲ್ಲಿ ಮಾತ್ರ ಪಕ್ಷದ ವಿಚಾರ ಬರುತ್ತದೆ. ಆದರೆ, ನೀರಿನ ಹಕ್ಕು ಬಂದಾಗ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಮಹದಾಯಿ ನೀರು ಪಡೆಯುವ ವಿಚಾರದಲ್ಲಿ ಗೋವಾ ಹಾಗೂ ಮಹಾರಾಷ್ಟ್ರದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ. ಚುನಾವಣೆಗೂ ಅದಕ್ಕೂ ಸಂಬಂಧವಿಲ್ಲ. ನಮ್ಮ ಹಕ್ಕು ಕೇಳುವ ವಿಚಾರದಲ್ಲಿ ಸುಮ್ಮನಿರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.