‘ಉಪಾಧ್ಯಕ್ಷರಾಗಿ ರಾಜೇಂದ್ರ ಹಂಜಿ, ಬಸವರಾಜ ತಟವಟಿ, ಆಡಳಿತ ಮಂಡಳಿ ಸದಸ್ಯರಾಗಿ ಪ್ರಭಾಕರ ಕೋರೆ, ಪ್ರವೀಣ ಬಾಗೇವಾಡಿ, ಮಹಾಂತೇಶ ಕವಟಗಿಮಠ, ಅಮಿತ ಕೋರೆ, ಶ್ರೀಶೈಲಪ್ಪ ಮೆಟಗುಡ್, ಜಯಾನಂದ ಮುನವಳ್ಳಿ, ಶಂಕರಣ್ಣ ಮುನವಳ್ಳಿ, ಬಸವರಾಜ ಪಾಟೀಲ, ಡಾ.ವಿಶ್ವನಾಥ ಪಾಟೀಲ, ಯಲ್ಲನಗೌಡ ಪಾಟೀಲ, ಅನಿಲ ಪಟ್ಟೇದ ಹಾಗೂ ಡಾ.ವಿರೂಪಾಕ್ಷಿ ಸಾಧುನವರ ಆಯ್ಕೆಯಾಗಿದ್ದಾರೆ. ಹೀಗಾಗಿ, ಫೆ. 29ರಂದು ಹುಬ್ಬಳ್ಳಿಯ ಬಿ.ವಿ. ಭೂಮರೆಡ್ಡಿ ತಾಂತ್ರಿಕ ಕಾಲೇಜು ಮತ್ತು ಮಾರ್ಚ್ 1ರಂದು ಬೆಳಗಾವಿಯ ಲಿಂಗರಾಜ ಕಾಲೇಜು ಆವರಣದಲ್ಲಿ ನಿಗದಿಯಾಗಿದ್ದ ಮತದಾನವನ್ನು ರದ್ದುಪಡಿಸಲಾಗಿದೆ. ಮಾರ್ಚ್ 1ರಂದು ಸರ್ವ ಸದಸ್ಯರ ಸಭೆಯ ಬಳಿಕ ನೂತನ ಕಾರ್ಯಾಧ್ಯಕ್ಷರನ್ನು ಪ್ರಕಟಿಸಲಾಗುವುದು’ ಎಂದು ತಿಳಿಸಿದರು.