<p><strong>ಚಿಕ್ಕೋಡಿ(ಬೆಳಗಾವಿ ಜಿಲ್ಲೆ):</strong> ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬುವ ಹಂತಕ್ಕೆ ತಲುಪಿದ ರಾಜಾಪುರ ಬ್ಯಾರೇಜ್ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ.</p><p>ರಾಜಾಪುರ ಬ್ಯಾರೇಜ್ ತುಂಬಿದ್ದರಿಂದ 2,500 ಕ್ಯೂಸೆಕ್ ಹೆಚ್ಚುವರಿ ನೀರು ಕಳೆದೆರಡು ದಿನಗಳಿಂದ ಕೃಷ್ಣಾ ನದಿಗೆ ಹರಿದುಬರುತ್ತಿತ್ತು. ಆದರೆ, ಭಾನುವಾರ ಈ ಬ್ಯಾರೇಜ್ಗೆ ಗೇಟ್ ಅಳವಡಿಸಿಕೊಳ್ಳುವ ಮೂಲಕ ರಾಜ್ಯಕ್ಕೆ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ. ಆದರೆ, ಕರ್ನಾಟಕಕ್ಕೆ ಬರುತ್ತಿದ್ದ ಏಕೆ ತಡೆಹಿಡಿಯಲಾಗಿದೆ ಎಂದು ಅಲ್ಲಿನ ಸರ್ಕಾರ ಸ್ಪಷ್ಟಪಡಿಸಿಲ್ಲ.</p><p>ನೀರಾವರಿ ಇಲಾಖೆ, ಪೊಲೀಸ್ ಇಲಾಖೆಯ ತಲಾ ಇಬ್ಬರು ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಿದ ಮಹಾರಾಷ್ಟ್ರ ಸರ್ಕಾರ, ಕರ್ನಾಟಕಕ್ಕೆ ನೀರು ಹೋಗದಂತೆ ನಿಗಾ ವಹಿಸಿದೆ.</p><p>ಕುಡಿಯುವ ನೀರಿನ ಹಾಹಾಕಾರದಿಂದ ತತ್ತರಿಸಿದ್ದ ಕೃಷ್ಣಾ ನದಿಪಾತ್ರದ ಜನರಿಗೆ ಮಹಾರಾಷ್ಟ್ರದ ನೀರಿನಿಂದ ಅನುಕೂಲವಾಗಿತ್ತು. ಈಗ ನೀರು ಬಾರದಂತೆ ತಡೆದ ಕಾರಣ, ಕೃಷ್ಣಾ ನದಿಯಲ್ಲಿ ನೀರು ಕಡಿಮೆಯಾಗುವ ಸಾಧ್ಯತೆ ಇದೆ. ನೀರಿಗಾಗಿ ಗಡಿಭಾಗದ ಜನ ಪರಿತಪಿಸುವಂತಾಗಿದೆ.</p><p><strong>ಜಲತಂಟೆ ಮುಂದುವರಿಸಿದೆ:</strong> ‘ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಹೆಚ್ಚುವರಿ ನೀರಿಗೆ ತಡೆಯೊಡ್ಡಿದ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.<br>‘ರಾಜಾಪುರ ಬ್ಯಾರೇಜ್ನ ಎಲ್ಲ ಗೇಟ್ಗಳನ್ನು ಮಹಾರಾಷ್ಟ್ರ ಸರ್ಕಾರ ಮುಚ್ಚಿದೆ. ಬ್ಯಾರೇಜ್ ತುಂಬಿದ ನಂತರ ಮಳೆಗಾಲದಲ್ಲಿ ಏಕಕಾಲಕ್ಕೆ ಹೆಚ್ಚಿನ ನೀರು ಬಿಟ್ಟು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದರೆ ಅದಕ್ಕೆ ಮಹಾರಾಷ್ಟ್ರವೇ ನೇರಹೊಣೆ. ಈ ವಿಷಯವನ್ನು ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ತರಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ(ಬೆಳಗಾವಿ ಜಿಲ್ಲೆ):</strong> ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬುವ ಹಂತಕ್ಕೆ ತಲುಪಿದ ರಾಜಾಪುರ ಬ್ಯಾರೇಜ್ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ.</p><p>ರಾಜಾಪುರ ಬ್ಯಾರೇಜ್ ತುಂಬಿದ್ದರಿಂದ 2,500 ಕ್ಯೂಸೆಕ್ ಹೆಚ್ಚುವರಿ ನೀರು ಕಳೆದೆರಡು ದಿನಗಳಿಂದ ಕೃಷ್ಣಾ ನದಿಗೆ ಹರಿದುಬರುತ್ತಿತ್ತು. ಆದರೆ, ಭಾನುವಾರ ಈ ಬ್ಯಾರೇಜ್ಗೆ ಗೇಟ್ ಅಳವಡಿಸಿಕೊಳ್ಳುವ ಮೂಲಕ ರಾಜ್ಯಕ್ಕೆ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ. ಆದರೆ, ಕರ್ನಾಟಕಕ್ಕೆ ಬರುತ್ತಿದ್ದ ಏಕೆ ತಡೆಹಿಡಿಯಲಾಗಿದೆ ಎಂದು ಅಲ್ಲಿನ ಸರ್ಕಾರ ಸ್ಪಷ್ಟಪಡಿಸಿಲ್ಲ.</p><p>ನೀರಾವರಿ ಇಲಾಖೆ, ಪೊಲೀಸ್ ಇಲಾಖೆಯ ತಲಾ ಇಬ್ಬರು ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಿದ ಮಹಾರಾಷ್ಟ್ರ ಸರ್ಕಾರ, ಕರ್ನಾಟಕಕ್ಕೆ ನೀರು ಹೋಗದಂತೆ ನಿಗಾ ವಹಿಸಿದೆ.</p><p>ಕುಡಿಯುವ ನೀರಿನ ಹಾಹಾಕಾರದಿಂದ ತತ್ತರಿಸಿದ್ದ ಕೃಷ್ಣಾ ನದಿಪಾತ್ರದ ಜನರಿಗೆ ಮಹಾರಾಷ್ಟ್ರದ ನೀರಿನಿಂದ ಅನುಕೂಲವಾಗಿತ್ತು. ಈಗ ನೀರು ಬಾರದಂತೆ ತಡೆದ ಕಾರಣ, ಕೃಷ್ಣಾ ನದಿಯಲ್ಲಿ ನೀರು ಕಡಿಮೆಯಾಗುವ ಸಾಧ್ಯತೆ ಇದೆ. ನೀರಿಗಾಗಿ ಗಡಿಭಾಗದ ಜನ ಪರಿತಪಿಸುವಂತಾಗಿದೆ.</p><p><strong>ಜಲತಂಟೆ ಮುಂದುವರಿಸಿದೆ:</strong> ‘ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಹೆಚ್ಚುವರಿ ನೀರಿಗೆ ತಡೆಯೊಡ್ಡಿದ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.<br>‘ರಾಜಾಪುರ ಬ್ಯಾರೇಜ್ನ ಎಲ್ಲ ಗೇಟ್ಗಳನ್ನು ಮಹಾರಾಷ್ಟ್ರ ಸರ್ಕಾರ ಮುಚ್ಚಿದೆ. ಬ್ಯಾರೇಜ್ ತುಂಬಿದ ನಂತರ ಮಳೆಗಾಲದಲ್ಲಿ ಏಕಕಾಲಕ್ಕೆ ಹೆಚ್ಚಿನ ನೀರು ಬಿಟ್ಟು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದರೆ ಅದಕ್ಕೆ ಮಹಾರಾಷ್ಟ್ರವೇ ನೇರಹೊಣೆ. ಈ ವಿಷಯವನ್ನು ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ತರಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>