<p><strong>ಖಾನಾಪುರ (ಬೆಳಗಾವಿ ಜಿಲ್ಲೆ)</strong>: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ವೆಂಗುರ್ಲಾ ತಾಲ್ಲೂಕಿನ ಶಿರೋಡಾದ ವೇಳಾಗರ ಬೀಚಿನಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಶುಕ್ರವಾರ ರಾತ್ರಿ ಮೂವರ ಶವಗಳು ಪತ್ತೆಯಾಗಿದ್ದವು. ಶನಿವಾರ ಬೆಳಿಗ್ಗೆ ಮತ್ತೊಬ್ಬರ ಕೊನೆಯುಸಿರೆಳೆದರು. ನೀರಿನಲ್ಲಿ ಕಾಣೆಯಾಗಿದ್ದ ನಾಲ್ವರೂ ಬದುಕುಳಿದು, ಸುರಕ್ಷಿತವಾಗಿ ಮರಳಿದ್ದಾರೆ.</p>.<p>ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ಒಂದೇ ಕುಟುಂಬದ ಎಂಟು ಜನ ಸಂಬಂಧಿಗಳು ಅ.2ರಂದು ದಸರೆ ರಜೆ ಕಳೆಯಲು ಬೀಚಿಗೆ ತೆರಳಿದ್ದರು. ಬೋಟಿನಲ್ಲಿ ವಿಹಾರಕ್ಕೆಂದು ತೆರಳಿದ್ದಾಗ ಆಕಸ್ಮಿಕವಾಗಿ ಬೋಟ್ ಮುಳುಗಿತು. </p>.<p>ಲೋಂಡಾದ ಇರ್ಫಾನ್ ಇಸಾಕ್ ಕಿತ್ತೂರ (35), ಇವರ ಪತ್ನಿ ಫರಿನಾ ಇರ್ಫಾನ್ ಕಿತ್ತೂರ್ (31), ಇವರ ಪುತ್ರ ಇಬಾದ್ ಇರ್ಫಾನ್ ಕಿತ್ತೂರ್ (12) ಹಾಗೂ ಇರ್ಫಾನ್ ಅವರ ತಮ್ಮನ ಮಗ ಇಕ್ವಾನ್ ಇಮ್ರಾನ್ ಕಿತ್ತೂರ್ (15) ಜಲ ಸಮಾಧಿಯಾದವರು.</p>.<p>ಸಮುದ್ರದಲ್ಲಿ ಕಾಣೆಯಾಗಿದ್ದ ಇಮ್ರಾನ್ ಇಸಾಕ್ ಕಿತ್ತೂರ್ (37), ಜಬಿನ್ ಇಮ್ರಾನ್ ಕಿತ್ತೂರ್ (32), ಇಜಾನ್ ಇಮ್ರಾನ್ ಕಿತ್ತೂರ್ (10), ಇಸ್ರಾ ಇಮ್ರಾನ್ ಕಿತ್ತೂರ (17) ಸುರಕ್ಷಿತವಾಗಿದ್ದಾರೆ.</p>.<p>ಮೃತದೇಹಗಳನ್ನು ಮಹಾರಾಷ್ಟ್ರದ ಸಾವಂತವಾಡಿ ಆಸ್ಪತ್ರೆಗೆ ತರಲಾಗಿದೆ. ಮರಣೋತ್ತರ ಪರೀಕ್ಷೆ ನಂತರಸಂಜೆ ಲೋಂಡಾಗೆ ಸಾಗಿಸಲಾಗುತ್ತದೆ ಎಂದು ಖಾನಾಪುರ ಪೊಲೀಸರು ತಿಳಿಸಿದ್ದಾರೆ.</p>.ದಸರಾ ರಜೆ ಕಳೆಯಲು ಹೋಗಿ ಸಮುದ್ರ ಪಾಲಾದ ಕುಟುಂಬ: ಮೂವರ ಸಾವು, ನಾಲ್ವರು ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ (ಬೆಳಗಾವಿ ಜಿಲ್ಲೆ)</strong>: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ವೆಂಗುರ್ಲಾ ತಾಲ್ಲೂಕಿನ ಶಿರೋಡಾದ ವೇಳಾಗರ ಬೀಚಿನಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಶುಕ್ರವಾರ ರಾತ್ರಿ ಮೂವರ ಶವಗಳು ಪತ್ತೆಯಾಗಿದ್ದವು. ಶನಿವಾರ ಬೆಳಿಗ್ಗೆ ಮತ್ತೊಬ್ಬರ ಕೊನೆಯುಸಿರೆಳೆದರು. ನೀರಿನಲ್ಲಿ ಕಾಣೆಯಾಗಿದ್ದ ನಾಲ್ವರೂ ಬದುಕುಳಿದು, ಸುರಕ್ಷಿತವಾಗಿ ಮರಳಿದ್ದಾರೆ.</p>.<p>ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ಒಂದೇ ಕುಟುಂಬದ ಎಂಟು ಜನ ಸಂಬಂಧಿಗಳು ಅ.2ರಂದು ದಸರೆ ರಜೆ ಕಳೆಯಲು ಬೀಚಿಗೆ ತೆರಳಿದ್ದರು. ಬೋಟಿನಲ್ಲಿ ವಿಹಾರಕ್ಕೆಂದು ತೆರಳಿದ್ದಾಗ ಆಕಸ್ಮಿಕವಾಗಿ ಬೋಟ್ ಮುಳುಗಿತು. </p>.<p>ಲೋಂಡಾದ ಇರ್ಫಾನ್ ಇಸಾಕ್ ಕಿತ್ತೂರ (35), ಇವರ ಪತ್ನಿ ಫರಿನಾ ಇರ್ಫಾನ್ ಕಿತ್ತೂರ್ (31), ಇವರ ಪುತ್ರ ಇಬಾದ್ ಇರ್ಫಾನ್ ಕಿತ್ತೂರ್ (12) ಹಾಗೂ ಇರ್ಫಾನ್ ಅವರ ತಮ್ಮನ ಮಗ ಇಕ್ವಾನ್ ಇಮ್ರಾನ್ ಕಿತ್ತೂರ್ (15) ಜಲ ಸಮಾಧಿಯಾದವರು.</p>.<p>ಸಮುದ್ರದಲ್ಲಿ ಕಾಣೆಯಾಗಿದ್ದ ಇಮ್ರಾನ್ ಇಸಾಕ್ ಕಿತ್ತೂರ್ (37), ಜಬಿನ್ ಇಮ್ರಾನ್ ಕಿತ್ತೂರ್ (32), ಇಜಾನ್ ಇಮ್ರಾನ್ ಕಿತ್ತೂರ್ (10), ಇಸ್ರಾ ಇಮ್ರಾನ್ ಕಿತ್ತೂರ (17) ಸುರಕ್ಷಿತವಾಗಿದ್ದಾರೆ.</p>.<p>ಮೃತದೇಹಗಳನ್ನು ಮಹಾರಾಷ್ಟ್ರದ ಸಾವಂತವಾಡಿ ಆಸ್ಪತ್ರೆಗೆ ತರಲಾಗಿದೆ. ಮರಣೋತ್ತರ ಪರೀಕ್ಷೆ ನಂತರಸಂಜೆ ಲೋಂಡಾಗೆ ಸಾಗಿಸಲಾಗುತ್ತದೆ ಎಂದು ಖಾನಾಪುರ ಪೊಲೀಸರು ತಿಳಿಸಿದ್ದಾರೆ.</p>.ದಸರಾ ರಜೆ ಕಳೆಯಲು ಹೋಗಿ ಸಮುದ್ರ ಪಾಲಾದ ಕುಟುಂಬ: ಮೂವರ ಸಾವು, ನಾಲ್ವರು ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>