ಮುಂಬೈನಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, 'ಗಡಿ ಸಮಸ್ಯೆ ಕುರಿತ ನಮ್ಮ ದಾವೆ ಸುಪ್ರೀಂಕೋರ್ಟಿನಲ್ಲಿದೆ. ಕಾನೂನು ವ್ಯಾಪ್ತಿಯ ಚರ್ಚೆ ಅಲ್ಲಿ ನಡೆಯಲಿ. ಕೇಂದ್ರ ಸರ್ಕಾರ ಹಾಗೂ ಎರಡೂ ರಾಜ್ಯಗಳ ನಡುವೆ ಮಾತುಕತೆ ಮೂಲಕ ಈ ವಿವಾದ ಬಗೆಹರಿಸಿಕೊಳ್ಳುವುದು ಸೂಕ್ತ ಎಂಬುದು ನಮಗೆ ಅನ್ನಿಸುತ್ತಿದೆ' ಎಂದರು.