ನಗರದಲ್ಲಿ ಬುಧವಾರ ನಡೆದ ಸಭೆ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್, ‘ಈ ಬಾರಿ ಮಹಾಮೇಳಾವ್ ಯಶಸ್ವಿಗೊಳಿಸಲು ಮತ್ತು ಇದಕ್ಕಿರುವ ತೊಡಕುಗಳನ್ನು ನಿವಾರಿಸಲು ನಿರ್ಧರಿಸಿದ್ದೇವೆ. ಇದಕ್ಕಾಗಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿರುವ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಲಾಗುವುದು’ ಎಂದು ಹೇಳಿದರು.