<p><strong>ಬೆಳಗಾವಿ</strong>: ‘ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳು ಸಂಚರಿಸಲು ಬಿಡುವುದಿಲ್ಲ’ ಎಂದು ಎನ್ಸಿಪಿ ಯುವ ಘಟಕದ ಅಧ್ಯಕ್ಷ ಮೆಹಬೂಬ್ ಶೇಖ್ ಮುಂಬೈನಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.</p>.<p>‘ಬೆಳಗಾವಿಯಲ್ಲಿ ನಮ್ಮ ಉಪ ಮುಖ್ಯಮಂತ್ರಿಯನ್ನು ಅವಮಾನಿಸಲಾಗಿದೆ. ಹೀಗಾಗಿ, ಪ್ರತಿಭಟಿಸಿದ ಸಂಘಟನೆ ಹಾಗೂಕರ್ನಾಟಕ ಮುಖ್ಯಮಂತ್ರಿಗೆ ಈ ಮೂಲಕ ಎಚ್ಚರಿಸುತ್ತಿದ್ದೇನೆ. ಕರ್ನಾಟಕದ ಯಾವುದೇ ವಾಹನಗಳು ಬಂದರೂ ಅವುಗಳನ್ನು ಮಹಾರಾಷ್ಟ್ರ ಪ್ರವೇಶಿಸದಂತೆ ತಡೆಯುತ್ತೇವೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮೊದಲಾದ ಪ್ರದೇಶ ಸೇರಿಸಿ ಸಂಯುಕ್ತ ಮಹಾರಾಷ್ಟ್ರ ಮಾಡುವುದು ನಮ್ಮ ಕನಸು’ ಎಂದಿದ್ದಾರೆ.</p>.<p>‘ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು’ ಎಂದು ಆ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳು ಸಂಚರಿಸಲು ಬಿಡುವುದಿಲ್ಲ’ ಎಂದು ಎನ್ಸಿಪಿ ಯುವ ಘಟಕದ ಅಧ್ಯಕ್ಷ ಮೆಹಬೂಬ್ ಶೇಖ್ ಮುಂಬೈನಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.</p>.<p>‘ಬೆಳಗಾವಿಯಲ್ಲಿ ನಮ್ಮ ಉಪ ಮುಖ್ಯಮಂತ್ರಿಯನ್ನು ಅವಮಾನಿಸಲಾಗಿದೆ. ಹೀಗಾಗಿ, ಪ್ರತಿಭಟಿಸಿದ ಸಂಘಟನೆ ಹಾಗೂಕರ್ನಾಟಕ ಮುಖ್ಯಮಂತ್ರಿಗೆ ಈ ಮೂಲಕ ಎಚ್ಚರಿಸುತ್ತಿದ್ದೇನೆ. ಕರ್ನಾಟಕದ ಯಾವುದೇ ವಾಹನಗಳು ಬಂದರೂ ಅವುಗಳನ್ನು ಮಹಾರಾಷ್ಟ್ರ ಪ್ರವೇಶಿಸದಂತೆ ತಡೆಯುತ್ತೇವೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮೊದಲಾದ ಪ್ರದೇಶ ಸೇರಿಸಿ ಸಂಯುಕ್ತ ಮಹಾರಾಷ್ಟ್ರ ಮಾಡುವುದು ನಮ್ಮ ಕನಸು’ ಎಂದಿದ್ದಾರೆ.</p>.<p>‘ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು’ ಎಂದು ಆ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>