ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ವಾಹನ ಸಂಚಾರಕ್ಕೆ ನಿರ್ಬಂಧ: ಮೆಹಬೂಬ್ ಶೇಖ್ ಹೇಳಿಕೆ ವೈರಲ್

Last Updated 19 ನವೆಂಬರ್ 2020, 19:39 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳು ಸಂಚರಿಸಲು ಬಿಡುವುದಿಲ್ಲ’ ಎಂದು ಎನ್‌ಸಿಪಿ‌ ಯುವ ಘಟಕದ ಅಧ್ಯಕ್ಷ ಮೆಹಬೂಬ್ ಶೇಖ್ ಮುಂಬೈನಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

‘ಬೆಳಗಾವಿಯಲ್ಲಿ ನಮ್ಮ ಉಪ ಮುಖ್ಯಮಂತ್ರಿಯನ್ನು ಅವಮಾನಿಸಲಾಗಿದೆ. ಹೀಗಾಗಿ, ಪ್ರತಿಭಟಿಸಿದ ಸಂಘಟನೆ ಹಾಗೂಕರ್ನಾಟಕ ಮುಖ್ಯಮಂತ್ರಿಗೆ ಈ ಮೂಲಕ ಎಚ್ಚರಿಸುತ್ತಿದ್ದೇನೆ. ಕರ್ನಾಟಕದ ಯಾವುದೇ ವಾಹನಗಳು ಬಂದರೂ ಅವುಗಳನ್ನು ಮಹಾರಾಷ್ಟ್ರ ಪ್ರವೇಶಿಸದಂತೆ ತಡೆಯುತ್ತೇವೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮೊದಲಾದ ಪ್ರದೇಶ ಸೇರಿಸಿ ಸಂಯುಕ್ತ ಮಹಾರಾಷ್ಟ್ರ ಮಾಡುವುದು ನಮ್ಮ ಕನಸು’ ಎಂದಿದ್ದಾರೆ.

‘ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು’ ಎಂದು ಆ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT