ಯಲ್ಲಮ್ಮನ ಗುಡ್ಡಕ್ಕೆ ಬರುವವರಲ್ಲಿ ಮಹಾರಾಷ್ಟ್ರದವರೇ ಹೆಚ್ಚು. ಗಡಿ ತಂಟೆ ತಾರಕಕ್ಕೇರಿದ ಕಾರಣ ಭಕ್ತರಲ್ಲಿ ಭಯ ಮನೆ ಮಾಡಿತ್ತು. ಭಕ್ತರ ಮೇಲೆ ಹಲ್ಲೆ ನಡೆದಿದೆ ಎಂದು ಕೆಲವು ಸಾಮಾಜಿಕ ಜಾಲತಾಣಗಳು ವದಂತಿ ಹರಡಿದ್ದವು. ತಕ್ಷಣ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಗುಡ್ಡದಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದರು.