‘2002ರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ 22 ಗ್ರಾಮಗಳ ಜನರು ಅಗತ್ಯ ಮೂಲಭೂತ ಸೌಕರ್ಯ ನೀಡಿ ಇಲ್ಲವೇ, ಮಹಾರಾಷ್ಟ್ರಕ್ಕೆ ಸೇರುತ್ತೇವೆ ಎಂದು ನಿರ್ಧರಿಸಿದ್ದರು. ಅಂದಿನ ಕರ್ನಾಟಕ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸರ್ಕಾರ ₹ 204 ಕೋಟಿ ಅನುದಾನ ನೀಡಿ, ಮೂಲಸೌಕರ್ಯಕ್ಕೆ ಆದ್ಯತೆ ನೀಡಿದ್ದರು. ಅದೇ ಮಾದರಿಯಲ್ಲೇ ಮಹಾರಾಷ್ಟ್ರ ಸರ್ಕಾರ ನಮ್ಮ ಭಾಗದ ಹಳ್ಳಿಗಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಅನುದಾನ ಒದಗಿಸಬೇಕು’ ಎಂದು ಅಕ್ಕಲಕೋಟ ತಾಲ್ಲೂಕಿನ ಕನ್ನಡಿಗರು ಸಭೆ ನಡೆಸಿ, ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.