<p><strong>ಮಿರ್ಜಿ ಅಣ್ಣಾರಾಯ ವೇದಿಕೆ (ಕಾಗವಾಡ): </strong>‘ಮಹಾರಾಷ್ಟ್ರವು ಹಿಂದೆ ಕರ್ನಾಟಕವಾಗಿತ್ತು. ಕನ್ನಡ ನೆಲದಲ್ಲಿ ಮಹಾರಾಷ್ಟ್ರ ಹಾಗೂ ಮರಾಠಿ ಭಾಷೆಗಳೆರಡೂ ಉದಯವಾಯಿತು’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.</p>.<p>ಇಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಕನ್ನಡ ತಾಯಿ ಎಲ್ಲ ಭಾಷಿಕರನ್ನೂ ಅಪ್ಪಿಕೊಂಡಿದ್ದಾಳೆ. ಹೀಗಾಗಿ, ಇಲ್ಲಿರುವ ಎಲ್ಲರಿಗೂ ನಾವು ಕನ್ನಡಿಗರು ಎನ್ನುವ ಹೆಮ್ಮೆ ಇರಬೇಕು’ ಎಂದು ತಿಳಿಸಿದರು.</p>.<p>‘ಗಡಿ ನಾಡಿಯಲ್ಲಿ ಕನ್ನಡ ಸಮ್ಮೇಳನ ಅದ್ಧೂರಿಯಾಗಿ ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕಾಗವಾಡವು ರಾಜ್ಯಮಟ್ಟದ ಸಮ್ಮೇಳನ ನಡೆಸುವುದಕ್ಕೂ ಯೋಗ್ಯವಾಗಿದೆ. ಕನ್ನಡದವರೊಂದಿಗೆ ಮರಾಠಿ ಭಾಷಿಗರೂ ಪಾಲ್ಗೊಂಡಿರುವುದು ವಿಶೇಷ. ಈ ರೀತಿಯ ಬಾಂಧವ್ಯ ಮುಂದುವರಿಯಬೇಕು’ ಎಂದು ಆಶಿಸಿದರು.</p>.<p>ಮುರಗೋಡದ ಮಹಾಂತ ದುರದುಂಡೇಶ್ವರ ಮಠದ ನೀಲಕಂಠ ಸ್ವಾಮೀಜಿ ಮಾತನಾಡಿ, ‘ಕನ್ನಡ ಮಾತನಾಡುವ ಬದಲು ಎಲ್ಲರೂ ಝಾಲಾಚ್ ಪಾಯೀಜೆ ಎನ್ನುತ್ತಿದ್ದಾರೆ. ಪ್ರಸ್ತುತ ದಿನಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುತ್ತಿದ್ದೇವೆ. ಇದು ಸರಿಯಲ್ಲ’ ಎಂದರು.</p>.<p>‘ಬೆಳಗಾವಿಯ ಅನೇಕ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಕೇವಲ ಮಾತನಾಡುವ ಬದಲು ಕಾರ್ಯರೂಪಕ್ಕೆ ತರಬೇಕಾಗಿದೆ. ಮಹಾಜನ್ ಆಯೋಗದ ವರದಿ ಇದ್ದರೂ ಸಮಸ್ಯೆ ಹೆಚ್ಚಾಗುತ್ತಿದೆ. ರಾಜಕೀಯ ನೇತಾರರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಮಹಾಜನ್ ವರದಿ ಇನ್ನೂ ಜಾರಿ ಆಗುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಿರ್ಜಿ ಅಣ್ಣಾರಾಯ ವೇದಿಕೆ (ಕಾಗವಾಡ): </strong>‘ಮಹಾರಾಷ್ಟ್ರವು ಹಿಂದೆ ಕರ್ನಾಟಕವಾಗಿತ್ತು. ಕನ್ನಡ ನೆಲದಲ್ಲಿ ಮಹಾರಾಷ್ಟ್ರ ಹಾಗೂ ಮರಾಠಿ ಭಾಷೆಗಳೆರಡೂ ಉದಯವಾಯಿತು’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.</p>.<p>ಇಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಕನ್ನಡ ತಾಯಿ ಎಲ್ಲ ಭಾಷಿಕರನ್ನೂ ಅಪ್ಪಿಕೊಂಡಿದ್ದಾಳೆ. ಹೀಗಾಗಿ, ಇಲ್ಲಿರುವ ಎಲ್ಲರಿಗೂ ನಾವು ಕನ್ನಡಿಗರು ಎನ್ನುವ ಹೆಮ್ಮೆ ಇರಬೇಕು’ ಎಂದು ತಿಳಿಸಿದರು.</p>.<p>‘ಗಡಿ ನಾಡಿಯಲ್ಲಿ ಕನ್ನಡ ಸಮ್ಮೇಳನ ಅದ್ಧೂರಿಯಾಗಿ ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕಾಗವಾಡವು ರಾಜ್ಯಮಟ್ಟದ ಸಮ್ಮೇಳನ ನಡೆಸುವುದಕ್ಕೂ ಯೋಗ್ಯವಾಗಿದೆ. ಕನ್ನಡದವರೊಂದಿಗೆ ಮರಾಠಿ ಭಾಷಿಗರೂ ಪಾಲ್ಗೊಂಡಿರುವುದು ವಿಶೇಷ. ಈ ರೀತಿಯ ಬಾಂಧವ್ಯ ಮುಂದುವರಿಯಬೇಕು’ ಎಂದು ಆಶಿಸಿದರು.</p>.<p>ಮುರಗೋಡದ ಮಹಾಂತ ದುರದುಂಡೇಶ್ವರ ಮಠದ ನೀಲಕಂಠ ಸ್ವಾಮೀಜಿ ಮಾತನಾಡಿ, ‘ಕನ್ನಡ ಮಾತನಾಡುವ ಬದಲು ಎಲ್ಲರೂ ಝಾಲಾಚ್ ಪಾಯೀಜೆ ಎನ್ನುತ್ತಿದ್ದಾರೆ. ಪ್ರಸ್ತುತ ದಿನಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುತ್ತಿದ್ದೇವೆ. ಇದು ಸರಿಯಲ್ಲ’ ಎಂದರು.</p>.<p>‘ಬೆಳಗಾವಿಯ ಅನೇಕ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಕೇವಲ ಮಾತನಾಡುವ ಬದಲು ಕಾರ್ಯರೂಪಕ್ಕೆ ತರಬೇಕಾಗಿದೆ. ಮಹಾಜನ್ ಆಯೋಗದ ವರದಿ ಇದ್ದರೂ ಸಮಸ್ಯೆ ಹೆಚ್ಚಾಗುತ್ತಿದೆ. ರಾಜಕೀಯ ನೇತಾರರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಮಹಾಜನ್ ವರದಿ ಇನ್ನೂ ಜಾರಿ ಆಗುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>