<p><strong>ಬೆಳಗಾವಿ: </strong>ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಇಲ್ಲಿ ಶುಕ್ರವಾರ ಆಯೋಜಿಸಿದ್ದ ‘ಹುತಾತ್ಮರ ದಿನ’ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇಬಜಾರ್ ಠಾಣೆ ಪೊಲೀಸರು ವಶಕ್ಕೆ ಪಡೆದು, ಅವರ ರಾಜ್ಯದ ಗಡಿಗೆ ಬಿಟ್ಟು ಬಂದರು.</p>.<p>ಮಹಾರಾಷ್ಟ್ರದ ಮುಖಂಡರು ಬರುವ ಮುನ್ಸೂಚನೆಯಿಂದಾಗಿ, ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಹುತಾತ್ಮ ವೃತ್ತ ಸಂಪರ್ಕಿಸುವ ರಸ್ತೆಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ನಡುವೆ, ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ರಾಜೇಂದ್ರ ಪಾಟೀಲ ಪೊಲೀಸರ ಕಣ್ತಪ್ಪಿಸಿ ಇಲ್ಲಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಅವರನ್ನು ವಶಕ್ಕೆ ಪಡೆಯುವ ವೇಳೆ ಎಂಇಎಸ್ ಮುಖಂಡರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.</p>.<p>ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಗಡಿಭಾಗದಲ್ಲಿ ಆ ರಾಜ್ಯದ ನಾಯಕರ ಕ್ಯಾತೆ ಹೆಚ್ಚಾಗಿದೆ. ಪ್ರಚೋದನಕಾರಿ ಹೇಳಿಕೆಗಳಿಂದ ಗಡಿ ಭಾಗದಲ್ಲಿ ಶಾಂತಿ ಕದಡುತ್ತಿದೆ. ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದಪೊಲೀಸರು ನಿಗಾ ವಹಿಸಿದ್ದಾರೆ.</p>.<p>ಇತ್ತ, ಬೆಳಿಗ್ಗೆ ಹುತಾತ್ಮ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಇಎಸ್ನ ಮುಖಂಡರಾದ ಕಿರಣ ಠಾಕೂರ, ದೀಪಕ ದಳವಿ, ಮಾಲೋಜಿರಾವ ಅಷ್ಠೇಕರ ಮೊದಲಾದ ಮುಖಂಡರು ವೇದಿಕೆ ಹಂಚಿಕೊಂಡಿದ್ದು ಗಮನಸೆಳೆಯಿತು.</p>.<p>ಕಿರಣ ಠಾಕೂರ ಮಾತನಾಡಿ, ‘ಗಡಿ ವಿವಾದದಲ್ಲಿ ಪ್ರಾಣ ತೆತ್ತ 9 ಹುತಾತ್ಮರ ಬಲಿದಾನ ವ್ಯರ್ಥವಾಗಬಾರದು. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರವಿದ್ದು, ಎನ್.ಸಿ.ಪಿ.ಯೂ ಪಾಲುದಾರನಾಗಿದೆ. ಎರಡೂ ಪಕ್ಷಗಳ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ ಮೊದಲಿನಿಂದಲೂ ಗಡಿ ವಿವಾದದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಮುಂದೆ ವಿಳಂಬ ಸಲ್ಲದು. ತ್ವರಿತವಾಗಿ ಬಗೆಹರಿಯಬೇಕು’ ಎಂದರು.</p>.<p>‘ವಿವಾದ ಲೋಕಸಭೆಯಲ್ಲಿ ಬಗೆಹರಿಯದೆ ಇರುವುದರಿಂದಾಗಿ, 2004ರಲ್ಲಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈಗಲೂ ಲೋಕಸಭೆಯಲ್ಲಿ ವಿವಾದ ಬಗೆಹರಿಸಬಹುದು. ಮಹಾರಾಷ್ಟ್ರದ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ನ್ಯಾಯಾಲಯದಲ್ಲಿದೆ ಎನ್ನುವ ನೆಪ ಹೇಳಿಕೊಂಡು ಇನ್ನೆಷ್ಟು ವರ್ಷಗಳು ಕಾಯುವುದು? ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಕಾಯಬೇಕಾದರೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು. ಆಗ ಕರ್ನಾಟಕ ಪೊಲೀಸರ ಆಟ ನಡೆಯುವುದಿಲ್ಲ’ ಎಂದರು.</p>.<p>ಮುಖಂಡ ಮಾಲೋಜಿರಾವ ಅಷ್ಟೇಕರ, ‘ಮಹಾರಾಷ್ಟ್ರದ ನಾಯಕರ ಮೇಲೆ ಒತ್ತಡ ಹಾಕಲು ಎಂಇಎಸ್ ಮುಖಂಡರು ಹೀಗೆಯೇ ಒಗ್ಗಟ್ಟು ಪ್ರದರ್ಶಿಸಬೇಕು’ ಎಂದರು. ಮೆರವಣಿಗೆ ನಡೆಸಿ, ಗಡಿ ಭಾಗದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದರು.</p>.<p>ಇಲ್ಲಿನ ಕನ್ನಡ ಹೋರಾಟಗಾರರ ವಿರೋಧದ ನಡುವೆಯೂ ಕಾರ್ಯಕ್ರಮ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಇಲ್ಲಿ ಶುಕ್ರವಾರ ಆಯೋಜಿಸಿದ್ದ ‘ಹುತಾತ್ಮರ ದಿನ’ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇಬಜಾರ್ ಠಾಣೆ ಪೊಲೀಸರು ವಶಕ್ಕೆ ಪಡೆದು, ಅವರ ರಾಜ್ಯದ ಗಡಿಗೆ ಬಿಟ್ಟು ಬಂದರು.</p>.<p>ಮಹಾರಾಷ್ಟ್ರದ ಮುಖಂಡರು ಬರುವ ಮುನ್ಸೂಚನೆಯಿಂದಾಗಿ, ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಹುತಾತ್ಮ ವೃತ್ತ ಸಂಪರ್ಕಿಸುವ ರಸ್ತೆಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ನಡುವೆ, ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ರಾಜೇಂದ್ರ ಪಾಟೀಲ ಪೊಲೀಸರ ಕಣ್ತಪ್ಪಿಸಿ ಇಲ್ಲಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಅವರನ್ನು ವಶಕ್ಕೆ ಪಡೆಯುವ ವೇಳೆ ಎಂಇಎಸ್ ಮುಖಂಡರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.</p>.<p>ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಗಡಿಭಾಗದಲ್ಲಿ ಆ ರಾಜ್ಯದ ನಾಯಕರ ಕ್ಯಾತೆ ಹೆಚ್ಚಾಗಿದೆ. ಪ್ರಚೋದನಕಾರಿ ಹೇಳಿಕೆಗಳಿಂದ ಗಡಿ ಭಾಗದಲ್ಲಿ ಶಾಂತಿ ಕದಡುತ್ತಿದೆ. ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದಪೊಲೀಸರು ನಿಗಾ ವಹಿಸಿದ್ದಾರೆ.</p>.<p>ಇತ್ತ, ಬೆಳಿಗ್ಗೆ ಹುತಾತ್ಮ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಇಎಸ್ನ ಮುಖಂಡರಾದ ಕಿರಣ ಠಾಕೂರ, ದೀಪಕ ದಳವಿ, ಮಾಲೋಜಿರಾವ ಅಷ್ಠೇಕರ ಮೊದಲಾದ ಮುಖಂಡರು ವೇದಿಕೆ ಹಂಚಿಕೊಂಡಿದ್ದು ಗಮನಸೆಳೆಯಿತು.</p>.<p>ಕಿರಣ ಠಾಕೂರ ಮಾತನಾಡಿ, ‘ಗಡಿ ವಿವಾದದಲ್ಲಿ ಪ್ರಾಣ ತೆತ್ತ 9 ಹುತಾತ್ಮರ ಬಲಿದಾನ ವ್ಯರ್ಥವಾಗಬಾರದು. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರವಿದ್ದು, ಎನ್.ಸಿ.ಪಿ.ಯೂ ಪಾಲುದಾರನಾಗಿದೆ. ಎರಡೂ ಪಕ್ಷಗಳ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ ಮೊದಲಿನಿಂದಲೂ ಗಡಿ ವಿವಾದದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಮುಂದೆ ವಿಳಂಬ ಸಲ್ಲದು. ತ್ವರಿತವಾಗಿ ಬಗೆಹರಿಯಬೇಕು’ ಎಂದರು.</p>.<p>‘ವಿವಾದ ಲೋಕಸಭೆಯಲ್ಲಿ ಬಗೆಹರಿಯದೆ ಇರುವುದರಿಂದಾಗಿ, 2004ರಲ್ಲಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈಗಲೂ ಲೋಕಸಭೆಯಲ್ಲಿ ವಿವಾದ ಬಗೆಹರಿಸಬಹುದು. ಮಹಾರಾಷ್ಟ್ರದ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ನ್ಯಾಯಾಲಯದಲ್ಲಿದೆ ಎನ್ನುವ ನೆಪ ಹೇಳಿಕೊಂಡು ಇನ್ನೆಷ್ಟು ವರ್ಷಗಳು ಕಾಯುವುದು? ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಕಾಯಬೇಕಾದರೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು. ಆಗ ಕರ್ನಾಟಕ ಪೊಲೀಸರ ಆಟ ನಡೆಯುವುದಿಲ್ಲ’ ಎಂದರು.</p>.<p>ಮುಖಂಡ ಮಾಲೋಜಿರಾವ ಅಷ್ಟೇಕರ, ‘ಮಹಾರಾಷ್ಟ್ರದ ನಾಯಕರ ಮೇಲೆ ಒತ್ತಡ ಹಾಕಲು ಎಂಇಎಸ್ ಮುಖಂಡರು ಹೀಗೆಯೇ ಒಗ್ಗಟ್ಟು ಪ್ರದರ್ಶಿಸಬೇಕು’ ಎಂದರು. ಮೆರವಣಿಗೆ ನಡೆಸಿ, ಗಡಿ ಭಾಗದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದರು.</p>.<p>ಇಲ್ಲಿನ ಕನ್ನಡ ಹೋರಾಟಗಾರರ ವಿರೋಧದ ನಡುವೆಯೂ ಕಾರ್ಯಕ್ರಮ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>