ಕೃಷ್ಣಾ ನದಿ ಪ್ರವಾಹದಿಂದಾಗಿ ನಿರಾಶ್ರಿತರಾಗಿರುವವರಿಗೆ ರಡ್ಡೇರಹಟ್ಟಿಯಲ್ಲಿ ತೆರೆದಿರುವ ಗಂಜಿ ಕೇಂದ್ರದಲ್ಲಿ ಕುಂದುಕೊರತೆ ಆಲಿಸಲು ಕಾಂಗ್ರೆಸ್ ಮುಖಂಡರು ಹೋಗಿದ್ದರು. ಅದೇ ಸಮಯಕ್ಕೆ ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ತಮ್ಮ ಪುತ್ರ ಚಿದಾನಂದ ಸವದಿ ಜೊತೆ ಬಂದಿದ್ದರು. ಬಳಿಕ ಕುಮಠಳ್ಳಿ ಕೂಡ ಬಂದರು. ಆಗ, ಕಾಂಗ್ರೆಸ್ ಮುಖಂಡರು ಅಲ್ಲಿಂದ ತೆರಳಿದರು.