ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಠಳ್ಳಿಗೆ ಯೋಗ್ಯ ಸ್ಥಾನಮಾನ ಸಿಗುವ ಭರವಸೆ: ಶ್ರೀಮಂತ ಪಾಟೀಲ

Last Updated 13 ಫೆಬ್ರುವರಿ 2020, 11:17 IST
ಅಕ್ಷರ ಗಾತ್ರ

ಬೆಳಗಾವಿ: ‘ಉಪಚುನಾವಣೆಯಲ್ಲಿ ಗೆದ್ದಿರುವ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರಿಗೂ ಯೋಗ್ಯ ಸ್ಥಾನಮಾನ ನೀಡುವುದಾಗಿ ಪಕ್ಷದ ಹೈಕಮಾಂಡ್ ಭರವಸೆ ನೀಡಿದೆ. ಸದ್ಯದಲ್ಲಿಯೇ ಅವರಿಗೂ ಸಿಗಬಹುದು’ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.

ಇಲ್ಲಿಗೆ ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನಗೆ ಜವಳಿ ಹಾಗೂ ಅಲ್ಪಸಂಖ್ಯಾತ ಖಾತೆ ನೀಡಿದ್ದಾರೆ. ಜವಳಿ ಖಾತೆಯಲ್ಲಿ ಕೆಲಸ ಮಾಡಲು ಸಾಕಷ್ಟು ಅವಕಾಶಗಳಿವೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳಿವೆ. ಅವರಿಗೆ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದರು.

‘ಎಲ್ಲ ಖಾತೆಗಳು ಒಳ್ಳೆಯದಾಗಿವೆ. ಕೆಲಸ ಮಾಡಲು ಅವಕಾಶ ಇದ್ದೇ ಇರುತ್ತದೆ’ ಎಂದು ತಿಳಿಸಿದರು.

‘ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸುವ ಬಗ್ಗೆ ಹಾಗೂ ಯಾರಿಗೆ ನೀಡಬೇಕು ಎನ್ನುವುದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT