ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮೇಶ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ: ಮಹೇಶ ಕುಮಠಳ್ಳಿ

Last Updated 21 ಜೂನ್ 2021, 12:46 IST
ಅಕ್ಷರ ಗಾತ್ರ

ಅಥಣಿ (ಬೆಳಗಾವಿ ಜಿಲ್ಲೆ): ‘ಶಾಸಕ ರಮೇಶ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ವಿಚಾರ ನನಗೆ ಗೊತ್ತಿಲ್ಲ’ ಎಂದು ಅಥಣಿ ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ರಮೇಶ ಜೊತೆ ಮುಂಬೈಗೆ ಹೋಗಿಲ್ಲ. ಬೆಂಗಳೂರಲ್ಲಿದ್ದೆ. ಬೆಳಿಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜೀನಾಮೆ ಕೊಡುವುದಾಗಿ ಅವರು ನನ್ನೊಂದಿಗೆ ಅಥವಾ ಮಾಧ್ಯಮದ ಮುಂದೆಯೂ ಹೇಳಿಲ್ಲ. ಊಹಾ‍ಪೋಹಗಳು ಹರಿದಾಡುತ್ತಿರುವುದನ್ನು ನಾನೂ ಮಾಧ್ಯಮದಲ್ಲಿ ಗಮನಿಸಿದೆ’ ಎಂದು ಪ್ರತಿಕ್ರಿಯಿಸಿದರು.

‘ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರದ ಅವಧಿ ಪೂರೈಸಲಿದ್ದಾರೆ. ಈ ವಿಷಯದಲ್ಲಿ ಗೊಂದಲವಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT