ಅವರು ಆ ತಾಲ್ಲೂಕಿನಲ್ಲಿ ಕೃಷ್ಣಾ ನದಿಯ ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲಾಗದೆ ಈ ಮಾತುಗಳನ್ನು ಇತ್ತೀಚೆಗೆ ಅಥಣಿಯ ಪ್ರವಾಸಿಮಂದಿರದಲ್ಲಿ ಆಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲಿದ್ದ ವ್ಯಕ್ತಿಯೊಬ್ಬರು ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ. ಶಾಸಕರ ಮಾತುಗಳಿಗೆ ಟೀಕೆ ವ್ಯಕ್ತವಾಗಿದೆ. ಸಂತ್ರಸ್ತರು ಜನಪ್ರತಿನಿಧಿ ಜೊತೆ ದೂರು ಹೇಳಿಕೊಳ್ಳಬಾರದೆ ಎಂಬ ಪ್ರಶ್ನೆಗಳು ಕೇಳಿಬಂದಿವೆ.