ಸಂಕ್ರಾಂತಿ ಅಂಗವಾಗಿ ಕೆಲವರು ಮಲಪ್ರಭಾ, ಘಟಪ್ರಭಾ, ಕೃಷ್ಣಾ ಮತ್ತಿತರ ನದಿಗಳ ತೀರದಲ್ಲಿರುವ ದೇವಸ್ಥಾನಗಳಿಗೆ ಹೋಗಿ ಪುಣ್ಯಸ್ನಾನ ಮಾಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ವಿವಿಧ ಜಲಾಶಯಗಳು, ಪ್ರೇಕ್ಷಣೀಯ ಸ್ಥಳಗಳು ಮತ್ತು ಕೃಷಿಭೂಮಿಗಳತ್ತ ಮುಖಮಾಡಲಿದ್ದಾರೆ. ಅಲ್ಲಿ ಕುಟುಂಬಸ್ಥರು, ಸ್ನೇಹಿತರು ಒಟ್ಟಾಗಿ ಭೋಜನ ಸವಿದು ಸಂಭ್ರಮಿಸಲಿದ್ದಾರೆ.