<p>ಬೈಲಹೊಂಗಲ: ‘ಭಕ್ತಿ, ಕಾಯಕ, ದಾಸೋಹ, ಬಸವ ತತ್ವದಡಿಯಲ್ಲಿ ಪ್ರತಿಯೊಬ್ಬರು ಸೇವೆ ಸಲ್ಲಿಸಬೇಕು. ಗುರು ಬಸವಣ್ಣನ ಜೀವನ ಆದರ್ಶಗಳನ್ನು ಅಳವಡಿಸಿಕೊಂಡು ಧರ್ಮದಿಂದ ಸಾಗಬೇಕು’ ಎಂದು ಬೆಳಗಾವಿ-ನಾಗನೂರ ರುದ್ರಾಕ್ಷಿಮಠ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಶಾಖಾ ಮೂರುಸಾವಿರಮಠದಲ್ಲಿ ಬಸವ ಸಂಸ್ಕೃತಿ ಅಭಿಯಾನ 2025ರ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಬಾಗಲಕೋಟಿಯಿಂದ ಬೆಳಗಾವಿಗೆ ಸೆ.11 ರಂದು ಆಗಮಿಸಲಿರುವ ಬಸವ ಸಂಸ್ಕೃತಿ ರಥಯಾತ್ರೆಯಲ್ಲಿ ಲಿಂಗಾಯತ ಧರ್ಮ, ಜಾತಿ ಗಣತಿ ಕುರಿತು ಸಂವಾದ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು, ನಾಗರಿಕರು, ಮಠಾಧೀಶರು ಭಾಗವಹಿಸಲಿದ್ದಾರೆ’ ಎಂದರು.</p>.<p>ಬೆಳಗಾವಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ‘ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ ಆಯೋಜಿಸಲಾಗಿದ್ದು, ಜಿಲ್ಲೆಯಿಂದ ಭಕ್ತರು ಆಗಮಿಸಿ ಬಸವಣ್ಣನವರ ತತ್ವಗಳನ್ನು ನಾಡಿನ ಮೂಲೆ ಮೂಲೆಗೆ ಪಸರಿಸುವ ಕಾರ್ಯ ಯಶಸ್ವಿಗೊಳಿಸಬೇಕು’ ಎಂದು ತಿಳಿಸಿದರು.</p>.<p>ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ ಮಾತನಾಡಿ, ‘ಬಸವ ತತ್ವದಡಿ ಎಲ್ಲ ಸಂಘಟನೆಗಳು ಕೂಡಿಕೊಂಡು ಬಸವ ತತ್ವ , ಲಿಂಗಾಯತ ಧರ್ಮವನ್ನು ಉಳಿಸಿ, ಬೆಳೆಸುವಲ್ಲಿ ಕೈ ಜೋಡಿಸೋಣ’ ಎಂದರು.</p>.<p>ಪ್ರಕಾಶ ಮೂಗಬಸವ, ಬಿ.ಬಿ.ಗಣಾಚಾರಿ, ಪುರಸಭೆ ಅಧ್ಯಕ್ಷ ವಿನಯ ಬೋಳಣ್ಣವರ, ಎ.ಎನ್.ಬಾಳಿ ಮಾತನಾಡಿದರು.</p>.<p>ರುದ್ರಾಕ್ಷಿಮಠ ಬಸವಲಿಂಗ ಸ್ವಾಮೀಜಿ, ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಬಸವ ಸಂಸ್ಕೃತಿ ಅಭಿಯಾನ ಕರಪತ್ರ ಬಿಡುಗೊಳಿಸಲಾಯಿತು.</p>.<p>ಶಿವರಂಜನ ಬೋಳಣ್ಣವರ, ಬಸವರಾಜ ಕೌಜಲಗಿ, ಉಮೇಶ ಬೋಳತ್ತೀನ, ಮಹೇಶ ಕೋಟಗಿ, ಬಸವರಾಜ ಜನ್ಮಟ್ಟಿ, ಶ್ರೀಶೈಲ ಶರಣಪ್ಪನವರ, ಚಂದ್ರಶೇಖರ ಕೊಪ್ಪದ, ಅಶೋಕ ಮಳಗಲಿ ಹಾಗೂ ತಾಲ್ಲೂಕಿನ ವಿವಿಧ ಬಸವ ಲಿಂಗಾಯತ ಪರ ಸಂಘಟನೆ ಮುಖಂಡರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಲಹೊಂಗಲ: ‘ಭಕ್ತಿ, ಕಾಯಕ, ದಾಸೋಹ, ಬಸವ ತತ್ವದಡಿಯಲ್ಲಿ ಪ್ರತಿಯೊಬ್ಬರು ಸೇವೆ ಸಲ್ಲಿಸಬೇಕು. ಗುರು ಬಸವಣ್ಣನ ಜೀವನ ಆದರ್ಶಗಳನ್ನು ಅಳವಡಿಸಿಕೊಂಡು ಧರ್ಮದಿಂದ ಸಾಗಬೇಕು’ ಎಂದು ಬೆಳಗಾವಿ-ನಾಗನೂರ ರುದ್ರಾಕ್ಷಿಮಠ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಶಾಖಾ ಮೂರುಸಾವಿರಮಠದಲ್ಲಿ ಬಸವ ಸಂಸ್ಕೃತಿ ಅಭಿಯಾನ 2025ರ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಬಾಗಲಕೋಟಿಯಿಂದ ಬೆಳಗಾವಿಗೆ ಸೆ.11 ರಂದು ಆಗಮಿಸಲಿರುವ ಬಸವ ಸಂಸ್ಕೃತಿ ರಥಯಾತ್ರೆಯಲ್ಲಿ ಲಿಂಗಾಯತ ಧರ್ಮ, ಜಾತಿ ಗಣತಿ ಕುರಿತು ಸಂವಾದ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು, ನಾಗರಿಕರು, ಮಠಾಧೀಶರು ಭಾಗವಹಿಸಲಿದ್ದಾರೆ’ ಎಂದರು.</p>.<p>ಬೆಳಗಾವಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ‘ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ ಆಯೋಜಿಸಲಾಗಿದ್ದು, ಜಿಲ್ಲೆಯಿಂದ ಭಕ್ತರು ಆಗಮಿಸಿ ಬಸವಣ್ಣನವರ ತತ್ವಗಳನ್ನು ನಾಡಿನ ಮೂಲೆ ಮೂಲೆಗೆ ಪಸರಿಸುವ ಕಾರ್ಯ ಯಶಸ್ವಿಗೊಳಿಸಬೇಕು’ ಎಂದು ತಿಳಿಸಿದರು.</p>.<p>ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ ಮಾತನಾಡಿ, ‘ಬಸವ ತತ್ವದಡಿ ಎಲ್ಲ ಸಂಘಟನೆಗಳು ಕೂಡಿಕೊಂಡು ಬಸವ ತತ್ವ , ಲಿಂಗಾಯತ ಧರ್ಮವನ್ನು ಉಳಿಸಿ, ಬೆಳೆಸುವಲ್ಲಿ ಕೈ ಜೋಡಿಸೋಣ’ ಎಂದರು.</p>.<p>ಪ್ರಕಾಶ ಮೂಗಬಸವ, ಬಿ.ಬಿ.ಗಣಾಚಾರಿ, ಪುರಸಭೆ ಅಧ್ಯಕ್ಷ ವಿನಯ ಬೋಳಣ್ಣವರ, ಎ.ಎನ್.ಬಾಳಿ ಮಾತನಾಡಿದರು.</p>.<p>ರುದ್ರಾಕ್ಷಿಮಠ ಬಸವಲಿಂಗ ಸ್ವಾಮೀಜಿ, ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಬಸವ ಸಂಸ್ಕೃತಿ ಅಭಿಯಾನ ಕರಪತ್ರ ಬಿಡುಗೊಳಿಸಲಾಯಿತು.</p>.<p>ಶಿವರಂಜನ ಬೋಳಣ್ಣವರ, ಬಸವರಾಜ ಕೌಜಲಗಿ, ಉಮೇಶ ಬೋಳತ್ತೀನ, ಮಹೇಶ ಕೋಟಗಿ, ಬಸವರಾಜ ಜನ್ಮಟ್ಟಿ, ಶ್ರೀಶೈಲ ಶರಣಪ್ಪನವರ, ಚಂದ್ರಶೇಖರ ಕೊಪ್ಪದ, ಅಶೋಕ ಮಳಗಲಿ ಹಾಗೂ ತಾಲ್ಲೂಕಿನ ವಿವಿಧ ಬಸವ ಲಿಂಗಾಯತ ಪರ ಸಂಘಟನೆ ಮುಖಂಡರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>