<p><strong>ಬೆಳಗಾವಿ: </strong>ಇಲ್ಲಿನ ಶಿರಸಂಗಿ ಲಿಂಗರಾಜ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯಲ್ಲಿ 145 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮ ಸೋಮವಾರ ನಡೆಯಿತು.</p>.<p>ಮಲಬಾರ್ ಚಾರಿಟಬಲ್ ಟ್ರಸ್ಟ್ನಿಂದ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯಿತು. ಸರ್ದಾರ್ ಕಾಲೇಜು, ವಡಗಾವಿ, ಚಿಂತಾಮಣರಾವ್, ಬೈಲಹೊಂಗಲ ತಾಲ್ಲೂಕು ನೇಸರಗಿ ಮತ್ತು ಖಾನಾಪುರದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಆಯ್ದ ವಿದ್ಯಾರ್ಥಿಗಳಿಗೆ ತಲಾ ₹ 500ರಂತೆ ₹ 7.25 ಲಕ್ಷ ವಿತರಿಸಲಾಯಿತು.</p>.<p>ವಿತರಿಸಿದ ಸಂಸದೆ ಮಂಗಲಾ ಸುರೇಶ ಅಂಗಡಿ ಮಾತನಾಡಿ, ‘ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರನ್ನು ಪ್ರೋತ್ಸಾಹಿಸಬೇಕು. ಅವರು ಉತ್ತಮ ವಿದ್ಯಾಭ್ಯಾಸ ಪಡೆದು ನೌಕರಿ ಪಡೆದರೆ ಇಡೀ ಕುಟುಂಬ ಆರ್ಥಿಕವಾಗಿ ಸಬಲಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಮಲಬಾರ್ ಚಾರಿಟಬಲ್ ಟ್ರಸ್ಟ್ನವರು ಪ್ರೇರಣಾದಾಯಕ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕಳ್ಳಿಮಠ, ಆದರ್ಶ ನೂಲಿ, ಉಮೇಶ ಹಿರೇಮಠ, ವಿಜಯಕುಮಾರ್ ಶಿಂತ್ರಿ, ಮಳಿಗೆ ಮುಖ್ಯಸ್ಥ ಸವದ್ ಪಿ.ಐ., ಸಹಾಯಕ ಮಳಿಗೆ ವ್ಯವಸ್ಥಾಪಕ ಸೂರಜ್ ಅನ್ವೇಕರ, ಆನಂದ ಬುಲಬುಲೆ ಹಾಗೂ ಚೇತನ ಕಾಂಬ್ಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ಶಿರಸಂಗಿ ಲಿಂಗರಾಜ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯಲ್ಲಿ 145 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮ ಸೋಮವಾರ ನಡೆಯಿತು.</p>.<p>ಮಲಬಾರ್ ಚಾರಿಟಬಲ್ ಟ್ರಸ್ಟ್ನಿಂದ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯಿತು. ಸರ್ದಾರ್ ಕಾಲೇಜು, ವಡಗಾವಿ, ಚಿಂತಾಮಣರಾವ್, ಬೈಲಹೊಂಗಲ ತಾಲ್ಲೂಕು ನೇಸರಗಿ ಮತ್ತು ಖಾನಾಪುರದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಆಯ್ದ ವಿದ್ಯಾರ್ಥಿಗಳಿಗೆ ತಲಾ ₹ 500ರಂತೆ ₹ 7.25 ಲಕ್ಷ ವಿತರಿಸಲಾಯಿತು.</p>.<p>ವಿತರಿಸಿದ ಸಂಸದೆ ಮಂಗಲಾ ಸುರೇಶ ಅಂಗಡಿ ಮಾತನಾಡಿ, ‘ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರನ್ನು ಪ್ರೋತ್ಸಾಹಿಸಬೇಕು. ಅವರು ಉತ್ತಮ ವಿದ್ಯಾಭ್ಯಾಸ ಪಡೆದು ನೌಕರಿ ಪಡೆದರೆ ಇಡೀ ಕುಟುಂಬ ಆರ್ಥಿಕವಾಗಿ ಸಬಲಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಮಲಬಾರ್ ಚಾರಿಟಬಲ್ ಟ್ರಸ್ಟ್ನವರು ಪ್ರೇರಣಾದಾಯಕ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕಳ್ಳಿಮಠ, ಆದರ್ಶ ನೂಲಿ, ಉಮೇಶ ಹಿರೇಮಠ, ವಿಜಯಕುಮಾರ್ ಶಿಂತ್ರಿ, ಮಳಿಗೆ ಮುಖ್ಯಸ್ಥ ಸವದ್ ಪಿ.ಐ., ಸಹಾಯಕ ಮಳಿಗೆ ವ್ಯವಸ್ಥಾಪಕ ಸೂರಜ್ ಅನ್ವೇಕರ, ಆನಂದ ಬುಲಬುಲೆ ಹಾಗೂ ಚೇತನ ಕಾಂಬ್ಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>