<p><strong>ಬೈಲಹೊಂಗಲ:</strong> ಪಟ್ಟಣದ ಮರಡಿ ಗಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಭಾನುವಾರ ಸಂಭ್ರಮದಿಂದ ನೆರವೇರಿತು.</p>.<p>ಪಟ್ಟಣದ ಎತ್ತರ ಪ್ರದೇಶದಲ್ಲಿರುವ ದೇವಸ್ಥಾನದಲ್ಲಿ ಪದ್ಧತಿಯಂತೆ ಈ ವರ್ಷವೂ ಮರಡಿ ಗಲ್ಲಿ ಹಿರಿಯರು, ರೈತ ಕುಟುಂಬಸ್ಥರು ಮಲ್ಲಯ್ಯಸ್ವಾಮಿ ಪ್ರತಿಮೆಗೆ ಅಲಂಕಾರ, ಅಭಿಷೇಕ ಮಾಡಿ ಭಕ್ತಿಯಿಂದ ಪ್ರಾರ್ಥಿಸಿದರು. ಮಲ್ಲಯ್ಯನ ಪ್ರತಿಮೆ ಎದುರು ಕವಲ ಕಟ್ಟಿ ವರ ಕೇಳಿದರು.</p>.<p>ಮಳೆ, ಬೆಳೆ ಸಂಪನ್ನವಾಗಲಿ, ರೈತಾಪಿ ಕುಟುಂಬ, ನಾಡು ಸಮೃದ್ಧವಾಗಿರಲಿ ಎಂದು ಪ್ರಾರ್ಥಿಸಿದರು.</p>.<p>ಬೆಟ್ಟದಲ್ಲಿರುವ ಮಲ್ಲಯ್ಯನ ದೇವಸ್ಥಾನಕ್ಕೆ ಬೆಳಿಗ್ಗೆಯಿಂದ ರಾತ್ರಿಯ ವರೆಗೆ ಅಧಿಕ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಹೂವು, ಹಣ್ಣು, ಕಾಯಿ, ಕರ್ಪೂರ, ನೈವೇದ್ಯ ಅರ್ಪಿಸಿದರು.</p>.<p>ದೇವಸ್ಥಾನ ಅರ್ಚಕ ನಾಗಪ್ಪ ಪೂಜೇರಿ ಮಲ್ಲಯ್ಯ ಸ್ವಾಮಿ ಪ್ರತಿಮೆಗೆ ಸಿಂಗರಿಸಿ, ಪೂಜೆ ನೆರವೇರಿಸಿದರು.</p>.<p>ಹಿರಿಯರಾದ ಗಂಗಪ್ಪ ತುರಮರಿ, ಬಸಪ್ಪ ಶಿರವಂತಿ, ಗದಿಗೆಪ್ಪ ತೋಟಗಿ, ಶಿವಬಸಪ್ಪ ತೋಟಗಿ, ನಾಗರಾಜ ಹುಲಕುಂದ, ಉಳವಪ್ಪ ತೋಟಗಿ, ಬಸವರಾಜ ಹುಲಕುಂದ, ಇತರರು ಜಾತ್ರೆ ಯಶಸ್ವಿಗೆ ಶ್ರಮಿಸಿದರು. ಭಕ್ತರಿಗೆ ಮಹಾಪ್ರಸಾದ ಉಣಬಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ:</strong> ಪಟ್ಟಣದ ಮರಡಿ ಗಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಭಾನುವಾರ ಸಂಭ್ರಮದಿಂದ ನೆರವೇರಿತು.</p>.<p>ಪಟ್ಟಣದ ಎತ್ತರ ಪ್ರದೇಶದಲ್ಲಿರುವ ದೇವಸ್ಥಾನದಲ್ಲಿ ಪದ್ಧತಿಯಂತೆ ಈ ವರ್ಷವೂ ಮರಡಿ ಗಲ್ಲಿ ಹಿರಿಯರು, ರೈತ ಕುಟುಂಬಸ್ಥರು ಮಲ್ಲಯ್ಯಸ್ವಾಮಿ ಪ್ರತಿಮೆಗೆ ಅಲಂಕಾರ, ಅಭಿಷೇಕ ಮಾಡಿ ಭಕ್ತಿಯಿಂದ ಪ್ರಾರ್ಥಿಸಿದರು. ಮಲ್ಲಯ್ಯನ ಪ್ರತಿಮೆ ಎದುರು ಕವಲ ಕಟ್ಟಿ ವರ ಕೇಳಿದರು.</p>.<p>ಮಳೆ, ಬೆಳೆ ಸಂಪನ್ನವಾಗಲಿ, ರೈತಾಪಿ ಕುಟುಂಬ, ನಾಡು ಸಮೃದ್ಧವಾಗಿರಲಿ ಎಂದು ಪ್ರಾರ್ಥಿಸಿದರು.</p>.<p>ಬೆಟ್ಟದಲ್ಲಿರುವ ಮಲ್ಲಯ್ಯನ ದೇವಸ್ಥಾನಕ್ಕೆ ಬೆಳಿಗ್ಗೆಯಿಂದ ರಾತ್ರಿಯ ವರೆಗೆ ಅಧಿಕ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಹೂವು, ಹಣ್ಣು, ಕಾಯಿ, ಕರ್ಪೂರ, ನೈವೇದ್ಯ ಅರ್ಪಿಸಿದರು.</p>.<p>ದೇವಸ್ಥಾನ ಅರ್ಚಕ ನಾಗಪ್ಪ ಪೂಜೇರಿ ಮಲ್ಲಯ್ಯ ಸ್ವಾಮಿ ಪ್ರತಿಮೆಗೆ ಸಿಂಗರಿಸಿ, ಪೂಜೆ ನೆರವೇರಿಸಿದರು.</p>.<p>ಹಿರಿಯರಾದ ಗಂಗಪ್ಪ ತುರಮರಿ, ಬಸಪ್ಪ ಶಿರವಂತಿ, ಗದಿಗೆಪ್ಪ ತೋಟಗಿ, ಶಿವಬಸಪ್ಪ ತೋಟಗಿ, ನಾಗರಾಜ ಹುಲಕುಂದ, ಉಳವಪ್ಪ ತೋಟಗಿ, ಬಸವರಾಜ ಹುಲಕುಂದ, ಇತರರು ಜಾತ್ರೆ ಯಶಸ್ವಿಗೆ ಶ್ರಮಿಸಿದರು. ಭಕ್ತರಿಗೆ ಮಹಾಪ್ರಸಾದ ಉಣಬಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>